Categories: ಕೋಲಾರ

21 ವರ್ಷದೊಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ- ಉಪನ್ಯಾಸಕ ಬೊಮ್ಮಸಂದ್ರ ರಾಮಕೃಷ್ಣ

ದೇಶದಲ್ಲಿ ಹಲವು ಸಂಘಟನೆಗಳಿವೆ. ಎಬಿವಿಪಿ ಬರಿ ಹಣೆ ಮೇಲೆ ನಾಮ ಇರುವುದಕ್ಕೆ ಸೀಮಿತವಾಗಿದೆ. ಸಮಾಜವಾದ ಎಂದರೆ ಅವರಿಗೆ ಆಗದು, 21 ವರ್ಷದ ಒಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ. ವಿದ್ಯಾರ್ಥಿಗಳು ಬದಲಾವಣೆಗೆ ಮನಸ್ಸು ಮಾಡಬೇಕು. ದೇಶದಲ್ಲಿನ ಆಗುಹೋಗುಗಳಿಗೆ ಸ್ಪಂದಿಸಬೇಕು. ಈ ಮನೋಭಾವವನ್ನು ನಾವೆಲ್ಲ ಬೆಳೆಸಿಕೊಂಡು ಸಾಮಾಜಿಕ ಹಾಗೂ ರಾಜಕೀಯವಾಗಿ ಬದಲಾವಣೆ ತರಬೇಕು ಎಂದು ಎಸ್ ಎಫ್ ಐ ಮಾಜಿ ಮುಖಂಡರು ಹಾಗೂ ಶಾರದಾ ಕಾಲೇಜಿನ ಉಪನ್ಯಾಸಕರಾದ ಬೊಮ್ಮಸಂದ್ರ ರಾಮಕೃಷ್ಣ ಸಲಹೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮುಳಬಾಗಿಲು ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾಧ್ಯಕ್ಷರಾದ ಶಿವಪ್ಪರವರು ಮಾತನಾಡಿ, ಮುಳಬಾಗಿಲು ತಾಲೂಕಿನಲ್ಲಿ ಎಸ್ ಎಫ್ ಐನ ಕೊಡುಗೆಗಳು ಬಹಳಷ್ಟು ಇವೆ. ಬಸ್ಸಿನ ಸಮಸ್ಯೆ, ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಗೆ ಎಸ್ ಎಫ್ ಐ ಹೋರಾಟ ನಡೆಸಿ ಜಯಗಳಿಸಿದೆ. ಶಿಕ್ಷಣದಲ್ಲಿ ಖಾಸಗೀಕರಣದಿಂದಾಗಿ ವಿದ್ಯಾರ್ಥಿಗಳು ಶುಲ್ಕ ಕಟ್ಟದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಶಾಲೆಗೆ ಕೇಸರಿ ಶಾಲು, ಹಿಜಾಬ್ ಹಾಕಿಕೊಂಡು ಬನ್ನಿ ಎಂದು ಸರ್ಕಾರಗಳು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿವೆ. ಇದರ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತಬೇಕು ಎಂದು ಸೂಚಿಸಿದರು.

ತದನಂತರ ಎಸ್ ಐ ತಾಲೂಕು ಕಾರ್ಯದರ್ಶಿ ಸುದರ್ಶನ್ ಮಾತನಾಡಿ, ಎಸ್ ಎಫ್ ಐ ಹೋರಾಟಗಳಿಂದ ಮುಳಬಾಗಿಲು ತಾಲೂಕಿನಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅಭಿವೃದ್ಧಿಯಾಗಿದೆ. ಇದಕ್ಕೆ ಉದಾಹರಣೆ ಹಿಂದಿನ ವರ್ಷ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಒತ್ತಾಯಿಸಲಾಗಿತ್ತು. ಪ್ರಥಮ ದರ್ಜೆ ಕಾಲೇಜಿನಲ್ಲಿ ಕೂಡ ಕ್ಯಾಂಟೀನ್ ತೆರೆಯಬೇಕು ಎಂದು ಮನವಿ ನೀಡಲಾಗಿತ್ತು. ಈಗ ಎರಡು ಕಟ್ಟಡಗಳು ಕಾಮಗಾರಿ ಪೂರ್ತಿಯಾಗಿವೆ. ಹಾಗೆಯೇ ಅವುಗಳನ್ನು ಆದಷ್ಟು ಬೇಗ ಉದ್ಘಾಟನೆಯನ್ನು ನಡೆಸಿ ಜನರ ಮುಂದೆಗೆ ತರಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಇಲ್ಲದಿದ್ದರೆ ಇನ್ನೂ ದೊಡ್ಡ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ತಾಲೂಕು ಸಮಿತಿ ಅಧ್ಯಕ್ಷರಾದ ಶಶಿಕುಮಾರ್, ತಾಲೂಕು ಕಾರ್ಯದರ್ಶಿ ಸುದರ್ಶನ್, ತಾಲೂಕು ವಿದ್ಯಾರ್ಥಿನಿಯರು, ಉಪಸಮಿತಿಯ ಸಂಚಾಲಕಿ ಲಿನಿತ ಹಾಗೂ ಸಮಿತಿ ಸದಸ್ಯರಾದ ಅಜಯ್ ಸುಭಾಷ್ ಅರ್ಚನಾ ಸೇರಿದಂತೆ ಮುಂತಾದವರಿದ್ದರು.

*ನೂತನ ತಾಲೂಕು ಸಮಿತಿ*

 *ತಾಲೂಕು ಅಧ್ಯಕ್ಷರು ಅರ್ಚನಾ

*ತಾಲೂಕು ಕಾರ್ಯದರ್ಶಿ ಸುದರ್ಶನ್(ಮರು ಆಯ್ಕೆ)

*ತಾಲೂಕು ಉಪಾಧ್ಯಕ್ಷರು ಸುಭಾಷ್ ಹಾಗೂ ಮುರಳಿ

*ತಾಲೂಕು ಸಹಕಾರ್ಯದರ್ಶಿಗಳಾಗಿ ಧನುಷ್ ಕುಮಾರ್, ಅನುಷಾ, ಫಿಜಾ ನೂರೈನ್,*

*ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನ್ ಸಾಗರ್ ಮನೋಜ್ ಧನಂಜಯ ಪ್ರದೀಪ್ ರಾಕೇಶ್ ಮಾಲತಿ ರಮ್ಯಾ ನಾಗೇಶ್ ರಶ್ಮಿ ಆಯ್ಕೆಯಾದರು…

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

7 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

8 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

9 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

9 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

13 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

21 hours ago