Categories: ಕೋಲಾರ

21 ವರ್ಷದೊಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ- ಉಪನ್ಯಾಸಕ ಬೊಮ್ಮಸಂದ್ರ ರಾಮಕೃಷ್ಣ

ದೇಶದಲ್ಲಿ ಹಲವು ಸಂಘಟನೆಗಳಿವೆ. ಎಬಿವಿಪಿ ಬರಿ ಹಣೆ ಮೇಲೆ ನಾಮ ಇರುವುದಕ್ಕೆ ಸೀಮಿತವಾಗಿದೆ. ಸಮಾಜವಾದ ಎಂದರೆ ಅವರಿಗೆ ಆಗದು, 21 ವರ್ಷದ ಒಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ. ವಿದ್ಯಾರ್ಥಿಗಳು ಬದಲಾವಣೆಗೆ ಮನಸ್ಸು ಮಾಡಬೇಕು. ದೇಶದಲ್ಲಿನ ಆಗುಹೋಗುಗಳಿಗೆ ಸ್ಪಂದಿಸಬೇಕು. ಈ ಮನೋಭಾವವನ್ನು ನಾವೆಲ್ಲ ಬೆಳೆಸಿಕೊಂಡು ಸಾಮಾಜಿಕ ಹಾಗೂ ರಾಜಕೀಯವಾಗಿ ಬದಲಾವಣೆ ತರಬೇಕು ಎಂದು ಎಸ್ ಎಫ್ ಐ ಮಾಜಿ ಮುಖಂಡರು ಹಾಗೂ ಶಾರದಾ ಕಾಲೇಜಿನ ಉಪನ್ಯಾಸಕರಾದ ಬೊಮ್ಮಸಂದ್ರ ರಾಮಕೃಷ್ಣ ಸಲಹೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮುಳಬಾಗಿಲು ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾಧ್ಯಕ್ಷರಾದ ಶಿವಪ್ಪರವರು ಮಾತನಾಡಿ, ಮುಳಬಾಗಿಲು ತಾಲೂಕಿನಲ್ಲಿ ಎಸ್ ಎಫ್ ಐನ ಕೊಡುಗೆಗಳು ಬಹಳಷ್ಟು ಇವೆ. ಬಸ್ಸಿನ ಸಮಸ್ಯೆ, ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಗೆ ಎಸ್ ಎಫ್ ಐ ಹೋರಾಟ ನಡೆಸಿ ಜಯಗಳಿಸಿದೆ. ಶಿಕ್ಷಣದಲ್ಲಿ ಖಾಸಗೀಕರಣದಿಂದಾಗಿ ವಿದ್ಯಾರ್ಥಿಗಳು ಶುಲ್ಕ ಕಟ್ಟದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಶಾಲೆಗೆ ಕೇಸರಿ ಶಾಲು, ಹಿಜಾಬ್ ಹಾಕಿಕೊಂಡು ಬನ್ನಿ ಎಂದು ಸರ್ಕಾರಗಳು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿವೆ. ಇದರ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತಬೇಕು ಎಂದು ಸೂಚಿಸಿದರು.

ತದನಂತರ ಎಸ್ ಐ ತಾಲೂಕು ಕಾರ್ಯದರ್ಶಿ ಸುದರ್ಶನ್ ಮಾತನಾಡಿ, ಎಸ್ ಎಫ್ ಐ ಹೋರಾಟಗಳಿಂದ ಮುಳಬಾಗಿಲು ತಾಲೂಕಿನಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅಭಿವೃದ್ಧಿಯಾಗಿದೆ. ಇದಕ್ಕೆ ಉದಾಹರಣೆ ಹಿಂದಿನ ವರ್ಷ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಒತ್ತಾಯಿಸಲಾಗಿತ್ತು. ಪ್ರಥಮ ದರ್ಜೆ ಕಾಲೇಜಿನಲ್ಲಿ ಕೂಡ ಕ್ಯಾಂಟೀನ್ ತೆರೆಯಬೇಕು ಎಂದು ಮನವಿ ನೀಡಲಾಗಿತ್ತು. ಈಗ ಎರಡು ಕಟ್ಟಡಗಳು ಕಾಮಗಾರಿ ಪೂರ್ತಿಯಾಗಿವೆ. ಹಾಗೆಯೇ ಅವುಗಳನ್ನು ಆದಷ್ಟು ಬೇಗ ಉದ್ಘಾಟನೆಯನ್ನು ನಡೆಸಿ ಜನರ ಮುಂದೆಗೆ ತರಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಇಲ್ಲದಿದ್ದರೆ ಇನ್ನೂ ದೊಡ್ಡ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ತಾಲೂಕು ಸಮಿತಿ ಅಧ್ಯಕ್ಷರಾದ ಶಶಿಕುಮಾರ್, ತಾಲೂಕು ಕಾರ್ಯದರ್ಶಿ ಸುದರ್ಶನ್, ತಾಲೂಕು ವಿದ್ಯಾರ್ಥಿನಿಯರು, ಉಪಸಮಿತಿಯ ಸಂಚಾಲಕಿ ಲಿನಿತ ಹಾಗೂ ಸಮಿತಿ ಸದಸ್ಯರಾದ ಅಜಯ್ ಸುಭಾಷ್ ಅರ್ಚನಾ ಸೇರಿದಂತೆ ಮುಂತಾದವರಿದ್ದರು.

*ನೂತನ ತಾಲೂಕು ಸಮಿತಿ*

 *ತಾಲೂಕು ಅಧ್ಯಕ್ಷರು ಅರ್ಚನಾ

*ತಾಲೂಕು ಕಾರ್ಯದರ್ಶಿ ಸುದರ್ಶನ್(ಮರು ಆಯ್ಕೆ)

*ತಾಲೂಕು ಉಪಾಧ್ಯಕ್ಷರು ಸುಭಾಷ್ ಹಾಗೂ ಮುರಳಿ

*ತಾಲೂಕು ಸಹಕಾರ್ಯದರ್ಶಿಗಳಾಗಿ ಧನುಷ್ ಕುಮಾರ್, ಅನುಷಾ, ಫಿಜಾ ನೂರೈನ್,*

*ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನ್ ಸಾಗರ್ ಮನೋಜ್ ಧನಂಜಯ ಪ್ರದೀಪ್ ರಾಕೇಶ್ ಮಾಲತಿ ರಮ್ಯಾ ನಾಗೇಶ್ ರಶ್ಮಿ ಆಯ್ಕೆಯಾದರು…

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

2 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

3 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

11 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

21 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

22 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago