Categories: ಕೋಲಾರ

21 ವರ್ಷದೊಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ- ಉಪನ್ಯಾಸಕ ಬೊಮ್ಮಸಂದ್ರ ರಾಮಕೃಷ್ಣ

ದೇಶದಲ್ಲಿ ಹಲವು ಸಂಘಟನೆಗಳಿವೆ. ಎಬಿವಿಪಿ ಬರಿ ಹಣೆ ಮೇಲೆ ನಾಮ ಇರುವುದಕ್ಕೆ ಸೀಮಿತವಾಗಿದೆ. ಸಮಾಜವಾದ ಎಂದರೆ ಅವರಿಗೆ ಆಗದು, 21 ವರ್ಷದ ಒಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ. ವಿದ್ಯಾರ್ಥಿಗಳು ಬದಲಾವಣೆಗೆ ಮನಸ್ಸು ಮಾಡಬೇಕು. ದೇಶದಲ್ಲಿನ ಆಗುಹೋಗುಗಳಿಗೆ ಸ್ಪಂದಿಸಬೇಕು. ಈ ಮನೋಭಾವವನ್ನು ನಾವೆಲ್ಲ ಬೆಳೆಸಿಕೊಂಡು ಸಾಮಾಜಿಕ ಹಾಗೂ ರಾಜಕೀಯವಾಗಿ ಬದಲಾವಣೆ ತರಬೇಕು ಎಂದು ಎಸ್ ಎಫ್ ಐ ಮಾಜಿ ಮುಖಂಡರು ಹಾಗೂ ಶಾರದಾ ಕಾಲೇಜಿನ ಉಪನ್ಯಾಸಕರಾದ ಬೊಮ್ಮಸಂದ್ರ ರಾಮಕೃಷ್ಣ ಸಲಹೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮುಳಬಾಗಿಲು ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾಧ್ಯಕ್ಷರಾದ ಶಿವಪ್ಪರವರು ಮಾತನಾಡಿ, ಮುಳಬಾಗಿಲು ತಾಲೂಕಿನಲ್ಲಿ ಎಸ್ ಎಫ್ ಐನ ಕೊಡುಗೆಗಳು ಬಹಳಷ್ಟು ಇವೆ. ಬಸ್ಸಿನ ಸಮಸ್ಯೆ, ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಗೆ ಎಸ್ ಎಫ್ ಐ ಹೋರಾಟ ನಡೆಸಿ ಜಯಗಳಿಸಿದೆ. ಶಿಕ್ಷಣದಲ್ಲಿ ಖಾಸಗೀಕರಣದಿಂದಾಗಿ ವಿದ್ಯಾರ್ಥಿಗಳು ಶುಲ್ಕ ಕಟ್ಟದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಶಾಲೆಗೆ ಕೇಸರಿ ಶಾಲು, ಹಿಜಾಬ್ ಹಾಕಿಕೊಂಡು ಬನ್ನಿ ಎಂದು ಸರ್ಕಾರಗಳು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿವೆ. ಇದರ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತಬೇಕು ಎಂದು ಸೂಚಿಸಿದರು.

ತದನಂತರ ಎಸ್ ಐ ತಾಲೂಕು ಕಾರ್ಯದರ್ಶಿ ಸುದರ್ಶನ್ ಮಾತನಾಡಿ, ಎಸ್ ಎಫ್ ಐ ಹೋರಾಟಗಳಿಂದ ಮುಳಬಾಗಿಲು ತಾಲೂಕಿನಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅಭಿವೃದ್ಧಿಯಾಗಿದೆ. ಇದಕ್ಕೆ ಉದಾಹರಣೆ ಹಿಂದಿನ ವರ್ಷ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಒತ್ತಾಯಿಸಲಾಗಿತ್ತು. ಪ್ರಥಮ ದರ್ಜೆ ಕಾಲೇಜಿನಲ್ಲಿ ಕೂಡ ಕ್ಯಾಂಟೀನ್ ತೆರೆಯಬೇಕು ಎಂದು ಮನವಿ ನೀಡಲಾಗಿತ್ತು. ಈಗ ಎರಡು ಕಟ್ಟಡಗಳು ಕಾಮಗಾರಿ ಪೂರ್ತಿಯಾಗಿವೆ. ಹಾಗೆಯೇ ಅವುಗಳನ್ನು ಆದಷ್ಟು ಬೇಗ ಉದ್ಘಾಟನೆಯನ್ನು ನಡೆಸಿ ಜನರ ಮುಂದೆಗೆ ತರಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಇಲ್ಲದಿದ್ದರೆ ಇನ್ನೂ ದೊಡ್ಡ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ತಾಲೂಕು ಸಮಿತಿ ಅಧ್ಯಕ್ಷರಾದ ಶಶಿಕುಮಾರ್, ತಾಲೂಕು ಕಾರ್ಯದರ್ಶಿ ಸುದರ್ಶನ್, ತಾಲೂಕು ವಿದ್ಯಾರ್ಥಿನಿಯರು, ಉಪಸಮಿತಿಯ ಸಂಚಾಲಕಿ ಲಿನಿತ ಹಾಗೂ ಸಮಿತಿ ಸದಸ್ಯರಾದ ಅಜಯ್ ಸುಭಾಷ್ ಅರ್ಚನಾ ಸೇರಿದಂತೆ ಮುಂತಾದವರಿದ್ದರು.

*ನೂತನ ತಾಲೂಕು ಸಮಿತಿ*

 *ತಾಲೂಕು ಅಧ್ಯಕ್ಷರು ಅರ್ಚನಾ

*ತಾಲೂಕು ಕಾರ್ಯದರ್ಶಿ ಸುದರ್ಶನ್(ಮರು ಆಯ್ಕೆ)

*ತಾಲೂಕು ಉಪಾಧ್ಯಕ್ಷರು ಸುಭಾಷ್ ಹಾಗೂ ಮುರಳಿ

*ತಾಲೂಕು ಸಹಕಾರ್ಯದರ್ಶಿಗಳಾಗಿ ಧನುಷ್ ಕುಮಾರ್, ಅನುಷಾ, ಫಿಜಾ ನೂರೈನ್,*

*ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನ್ ಸಾಗರ್ ಮನೋಜ್ ಧನಂಜಯ ಪ್ರದೀಪ್ ರಾಕೇಶ್ ಮಾಲತಿ ರಮ್ಯಾ ನಾಗೇಶ್ ರಶ್ಮಿ ಆಯ್ಕೆಯಾದರು…

Ramesh Babu

Journalist

Recent Posts

ಕಸ್ತೂರಿ ರಂಗನ್ ವರದಿ; ‘ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ’- ಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆ

ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ಸಾರ್ವಜನಿಕ ಸಭೆಯಲ್ಲಿ  ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು…

9 hours ago

ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಸರಿಪಡಿಸಲು ರೈತ ಸಂಘ ಆಗ್ರಹ

ಕೋಲಾರ : ನಗರದ ಶ್ರೀ ನರಸಿಂಹರಾಜ ಜಿಲ್ಲಾ ಆಸ್ಪತ್ರೆಯಲ್ಲಿ ಬಡ ರೋಗಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವುದು, ಖಾಸಗಿ…

10 hours ago

ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ…

11 hours ago

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

13 hours ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

19 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

1 day ago