Categories: ಕೋಲಾರ

21 ವರ್ಷದೊಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ- ಉಪನ್ಯಾಸಕ ಬೊಮ್ಮಸಂದ್ರ ರಾಮಕೃಷ್ಣ

ದೇಶದಲ್ಲಿ ಹಲವು ಸಂಘಟನೆಗಳಿವೆ. ಎಬಿವಿಪಿ ಬರಿ ಹಣೆ ಮೇಲೆ ನಾಮ ಇರುವುದಕ್ಕೆ ಸೀಮಿತವಾಗಿದೆ. ಸಮಾಜವಾದ ಎಂದರೆ ಅವರಿಗೆ ಆಗದು, 21 ವರ್ಷದ ಒಳಗೆ ನೀವು ಏನು ಸಾಧಿಸದೆ ಇದ್ದಲ್ಲಿ ಸಮಾಜ ನಿಮ್ಮನ್ನು ಗುರುತಿಸುವುದು ಕಷ್ಟ. ವಿದ್ಯಾರ್ಥಿಗಳು ಬದಲಾವಣೆಗೆ ಮನಸ್ಸು ಮಾಡಬೇಕು. ದೇಶದಲ್ಲಿನ ಆಗುಹೋಗುಗಳಿಗೆ ಸ್ಪಂದಿಸಬೇಕು. ಈ ಮನೋಭಾವವನ್ನು ನಾವೆಲ್ಲ ಬೆಳೆಸಿಕೊಂಡು ಸಾಮಾಜಿಕ ಹಾಗೂ ರಾಜಕೀಯವಾಗಿ ಬದಲಾವಣೆ ತರಬೇಕು ಎಂದು ಎಸ್ ಎಫ್ ಐ ಮಾಜಿ ಮುಖಂಡರು ಹಾಗೂ ಶಾರದಾ ಕಾಲೇಜಿನ ಉಪನ್ಯಾಸಕರಾದ ಬೊಮ್ಮಸಂದ್ರ ರಾಮಕೃಷ್ಣ ಸಲಹೆ ನೀಡಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಮುಳಬಾಗಿಲು ತಾಲೂಕು ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಿಲ್ಲಾಧ್ಯಕ್ಷರಾದ ಶಿವಪ್ಪರವರು ಮಾತನಾಡಿ, ಮುಳಬಾಗಿಲು ತಾಲೂಕಿನಲ್ಲಿ ಎಸ್ ಎಫ್ ಐನ ಕೊಡುಗೆಗಳು ಬಹಳಷ್ಟು ಇವೆ. ಬಸ್ಸಿನ ಸಮಸ್ಯೆ, ಶಾಲೆಯಲ್ಲಿ ಶಿಕ್ಷಕರ ಕೊರತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳಿಗೆ ಎಸ್ ಎಫ್ ಐ ಹೋರಾಟ ನಡೆಸಿ ಜಯಗಳಿಸಿದೆ. ಶಿಕ್ಷಣದಲ್ಲಿ ಖಾಸಗೀಕರಣದಿಂದಾಗಿ ವಿದ್ಯಾರ್ಥಿಗಳು ಶುಲ್ಕ ಕಟ್ಟದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ. ಶಾಲೆಗೆ ಕೇಸರಿ ಶಾಲು, ಹಿಜಾಬ್ ಹಾಕಿಕೊಂಡು ಬನ್ನಿ ಎಂದು ಸರ್ಕಾರಗಳು ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸುತ್ತಿವೆ. ಇದರ ವಿರುದ್ಧ ವಿದ್ಯಾರ್ಥಿಗಳು ಧ್ವನಿ ಎತ್ತಬೇಕು ಎಂದು ಸೂಚಿಸಿದರು.

ತದನಂತರ ಎಸ್ ಐ ತಾಲೂಕು ಕಾರ್ಯದರ್ಶಿ ಸುದರ್ಶನ್ ಮಾತನಾಡಿ, ಎಸ್ ಎಫ್ ಐ ಹೋರಾಟಗಳಿಂದ ಮುಳಬಾಗಿಲು ತಾಲೂಕಿನಲ್ಲಿ ಸಾಕಷ್ಟು ಬದಲಾವಣೆ ಹಾಗೂ ಅಭಿವೃದ್ಧಿಯಾಗಿದೆ. ಇದಕ್ಕೆ ಉದಾಹರಣೆ ಹಿಂದಿನ ವರ್ಷ ತಾಲೂಕು ಕೇಂದ್ರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಒತ್ತಾಯಿಸಲಾಗಿತ್ತು. ಪ್ರಥಮ ದರ್ಜೆ ಕಾಲೇಜಿನಲ್ಲಿ ಕೂಡ ಕ್ಯಾಂಟೀನ್ ತೆರೆಯಬೇಕು ಎಂದು ಮನವಿ ನೀಡಲಾಗಿತ್ತು. ಈಗ ಎರಡು ಕಟ್ಟಡಗಳು ಕಾಮಗಾರಿ ಪೂರ್ತಿಯಾಗಿವೆ. ಹಾಗೆಯೇ ಅವುಗಳನ್ನು ಆದಷ್ಟು ಬೇಗ ಉದ್ಘಾಟನೆಯನ್ನು ನಡೆಸಿ ಜನರ ಮುಂದೆಗೆ ತರಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇವೆ. ಇಲ್ಲದಿದ್ದರೆ ಇನ್ನೂ ದೊಡ್ಡ ಹೋರಾಟವನ್ನು ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಎಸ್ ಎಫ್ ತಾಲೂಕು ಸಮಿತಿ ಅಧ್ಯಕ್ಷರಾದ ಶಶಿಕುಮಾರ್, ತಾಲೂಕು ಕಾರ್ಯದರ್ಶಿ ಸುದರ್ಶನ್, ತಾಲೂಕು ವಿದ್ಯಾರ್ಥಿನಿಯರು, ಉಪಸಮಿತಿಯ ಸಂಚಾಲಕಿ ಲಿನಿತ ಹಾಗೂ ಸಮಿತಿ ಸದಸ್ಯರಾದ ಅಜಯ್ ಸುಭಾಷ್ ಅರ್ಚನಾ ಸೇರಿದಂತೆ ಮುಂತಾದವರಿದ್ದರು.

*ನೂತನ ತಾಲೂಕು ಸಮಿತಿ*

 *ತಾಲೂಕು ಅಧ್ಯಕ್ಷರು ಅರ್ಚನಾ

*ತಾಲೂಕು ಕಾರ್ಯದರ್ಶಿ ಸುದರ್ಶನ್(ಮರು ಆಯ್ಕೆ)

*ತಾಲೂಕು ಉಪಾಧ್ಯಕ್ಷರು ಸುಭಾಷ್ ಹಾಗೂ ಮುರಳಿ

*ತಾಲೂಕು ಸಹಕಾರ್ಯದರ್ಶಿಗಳಾಗಿ ಧನುಷ್ ಕುಮಾರ್, ಅನುಷಾ, ಫಿಜಾ ನೂರೈನ್,*

*ಸಮಿತಿ ಸದಸ್ಯರಾಗಿ ಮಲ್ಲಿಕಾರ್ಜುನ್ ಸಾಗರ್ ಮನೋಜ್ ಧನಂಜಯ ಪ್ರದೀಪ್ ರಾಕೇಶ್ ಮಾಲತಿ ರಮ್ಯಾ ನಾಗೇಶ್ ರಶ್ಮಿ ಆಯ್ಕೆಯಾದರು…

Ramesh Babu

Journalist

Recent Posts

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

8 hours ago

ಶ್ರೀ ಅಭಯ ಚೌಡೇಶ್ವರಿ ದೇವಿಯ ಜ್ಯೋತಿ, ಪಲ್ಲಕ್ಕಿ ಉತ್ಸವ

ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…

8 hours ago

ಗಂಗಸಂದ್ರದಲ್ಲಿ ಮೇ.6,7ರಂದು ಶ್ರೀ ಅಶ್ವತ್ಥ ಕಟ್ಟೆ ನಾಗ ದೇವರ ಪ್ರತಿಷ್ಠಾಪನಾ ಮಹೋತ್ಸವ

ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…

12 hours ago

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…

18 hours ago

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 day ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

1 day ago