2100 ಎಕರೆ ಭೂ ಸ್ವಾಧೀನ ಕೈಬಿಡಬೇಕು- ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯಿಂದ ನಡೆಸಲಾಗುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಫಲವತ್ತಾದ ಕೃಷಿ ಜಮೀನನ್ನು ಕರ್ನಾಟಕ ಇಂಡಸ್ಟ್ರಿಯಲ್ ಏರಿಯ ಡೆವಲಪೈಂಟ್ ಬೋರ್ಡ್ (ಕೆ.ಐ.ಎ.ಡಿ.ಬಿ.) ವತಿಯಿಂದ ಸ್ವಾಧೀನ ಪಡಿಸಿಕೊಳ್ಳುವ ಪಕ್ರಿಯೆ ಕೈಗೊಳ್ಳಲಾಗಿದೆ.

ತಾವುಗಳು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಇದೇ ಹೋಬಳಿಯ ಜಮೀನುಗಳನ್ನು ಹುಲಿಕುಂಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಸ್ತಾವನೆ ಪ್ರಕ್ರಿಯೆಯನ್ನು ಕೈ ಬಿಟ್ಟು ಬದಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ರವರಿಗೆ ಮನವಿ ಮಾಡಿರುತ್ತೀರ.

ಈ ಜಮೀನುಗಳು ನೀರಾವರಿ ಜಮೀನು, ಜೊತೆಗೆ ಫಲವತ್ತಾದ ಭೂಮಿಯಾಗಿದ್ದು, ರೈತರು ಅಡಿಕೆ ಮತ್ತು ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಜಮೀನನ್ನು ಸಮೀಕ್ಷೆ ಮಾಡಿದ ಅಧಿಕಾರಿಗಳು ಸರ್ವೇ ವರದಿಯ ಮಾಹಿತಿ ನೀಡುವಾಗ ಖಾಲಿ ಜಾಗ ಎಂದು ತಪ್ಪು ಮಾಹಿತಿಯನ್ನು ನೀಡಿದ್ದಾರೆ.

ಈ ಭೂಮಿಗಳು ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಅವರು ತಮ್ಮ ಜೀವನಾಧಾರ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಕ್ರಮವು ರೈತರ ಬದುಕಿನ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ. ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಸ್ಥಳೀಯ ರೈತರ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸಿ, ಜಮೀನನ್ನು ಸಮೀಕ್ಷೆ ಮಾಡಿ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹಾಗೂ 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ. ಮುಂದಿನ ಕ್ರಮಗಳನ್ನು ಕೈಬಿಡುವಂತೆ ಹಾಗೂ ಈ ವಿಷಯವನ್ನು ಅತ್ಯಂತ ತುರ್ತು ಹಾಗೂ ಗಂಭೀರ ವಿಷಯ ಎಂದು ಪರಿಗಣಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

9 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago