2100 ಎಕರೆ ಭೂ ಸ್ವಾಧೀನ ಕೈಬಿಡಬೇಕು- ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂಗೆ ಶಾಸಕ ಧೀರಜ್ ಮುನಿರಾಜ್ ಮನವಿ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯಿಂದ ನಡೆಸಲಾಗುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಫಲವತ್ತಾದ ಕೃಷಿ ಜಮೀನನ್ನು ಕರ್ನಾಟಕ ಇಂಡಸ್ಟ್ರಿಯಲ್ ಏರಿಯ ಡೆವಲಪೈಂಟ್ ಬೋರ್ಡ್ (ಕೆ.ಐ.ಎ.ಡಿ.ಬಿ.) ವತಿಯಿಂದ ಸ್ವಾಧೀನ ಪಡಿಸಿಕೊಳ್ಳುವ ಪಕ್ರಿಯೆ ಕೈಗೊಳ್ಳಲಾಗಿದೆ.

ತಾವುಗಳು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಇದೇ ಹೋಬಳಿಯ ಜಮೀನುಗಳನ್ನು ಹುಲಿಕುಂಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಸ್ತಾವನೆ ಪ್ರಕ್ರಿಯೆಯನ್ನು ಕೈ ಬಿಟ್ಟು ಬದಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ರವರಿಗೆ ಮನವಿ ಮಾಡಿರುತ್ತೀರ.

ಈ ಜಮೀನುಗಳು ನೀರಾವರಿ ಜಮೀನು, ಜೊತೆಗೆ ಫಲವತ್ತಾದ ಭೂಮಿಯಾಗಿದ್ದು, ರೈತರು ಅಡಿಕೆ ಮತ್ತು ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಜಮೀನನ್ನು ಸಮೀಕ್ಷೆ ಮಾಡಿದ ಅಧಿಕಾರಿಗಳು ಸರ್ವೇ ವರದಿಯ ಮಾಹಿತಿ ನೀಡುವಾಗ ಖಾಲಿ ಜಾಗ ಎಂದು ತಪ್ಪು ಮಾಹಿತಿಯನ್ನು ನೀಡಿದ್ದಾರೆ.

ಈ ಭೂಮಿಗಳು ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಅವರು ತಮ್ಮ ಜೀವನಾಧಾರ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಕ್ರಮವು ರೈತರ ಬದುಕಿನ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ. ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ, ಸ್ಥಳೀಯ ರೈತರ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸಿ, ಜಮೀನನ್ನು ಸಮೀಕ್ಷೆ ಮಾಡಿ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹಾಗೂ 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ. ಮುಂದಿನ ಕ್ರಮಗಳನ್ನು ಕೈಬಿಡುವಂತೆ ಹಾಗೂ ಈ ವಿಷಯವನ್ನು ಅತ್ಯಂತ ತುರ್ತು ಹಾಗೂ ಗಂಭೀರ ವಿಷಯ ಎಂದು ಪರಿಗಣಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

8 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

9 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

10 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

11 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

22 hours ago

ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು ಸಹ ಅಷ್ಟೇ ಸಂಕೀರ್ಣ….

ಸನ್ಮಾನ್ಯ ಶ್ರೀ ಎಚ್. ಡಿ. ದೇವೇಗೌಡ,... 94, ನಾಟ್ ಔಟ್, ಶತಕಕ್ಕೆ 6 ಮಾತ್ರ ಬಾಕಿ, ಅವರು ಶತಕವನ್ನು ಪೂರೈಸಲಿ…

22 hours ago