ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಯಿಂದ ನಡೆಸಲಾಗುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ತಪ್ಪು ಸರ್ವೇ ವರದಿ ನೀಡಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ ಪತ್ರ ಸಲ್ಲಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲ್ಲೂಕು, ದೊಡ್ಡಬೆಳವಂಗಲ ಹೋಬಳಿ ವ್ಯಾಪ್ತಿಯ ಚಿಕ್ಕಬೆಳವಂಗಲ, ಸೊನ್ನೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳಲ್ಲಿ ಸುಮಾರು 2100 ಎಕರೆ ಫಲವತ್ತಾದ ಕೃಷಿ ಜಮೀನನ್ನು ಕರ್ನಾಟಕ ಇಂಡಸ್ಟ್ರಿಯಲ್ ಏರಿಯ ಡೆವಲಪೈಂಟ್ ಬೋರ್ಡ್ (ಕೆ.ಐ.ಎ.ಡಿ.ಬಿ.) ವತಿಯಿಂದ ಸ್ವಾಧೀನ ಪಡಿಸಿಕೊಳ್ಳುವ ಪಕ್ರಿಯೆ ಕೈಗೊಳ್ಳಲಾಗಿದೆ.
ತಾವುಗಳು ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಇದೇ ಹೋಬಳಿಯ ಜಮೀನುಗಳನ್ನು ಹುಲಿಕುಂಟೆ ಕೈಗಾರಿಕಾ ಪ್ರದೇಶ ಸ್ಥಾಪನೆಗೆ ರೈತರ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಪ್ರಸ್ತಾವನೆ ಪ್ರಕ್ರಿಯೆಯನ್ನು ಕೈ ಬಿಟ್ಟು ಬದಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವಂತೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ ರವರಿಗೆ ಮನವಿ ಮಾಡಿರುತ್ತೀರ.
ಈ ಜಮೀನುಗಳು ನೀರಾವರಿ ಜಮೀನು, ಜೊತೆಗೆ ಫಲವತ್ತಾದ ಭೂಮಿಯಾಗಿದ್ದು, ರೈತರು ಅಡಿಕೆ ಮತ್ತು ಬಾಳೆ ಹಾಗೂ ಇನ್ನಿತರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಆದರೆ, ಜಮೀನನ್ನು ಸಮೀಕ್ಷೆ ಮಾಡಿದ ಅಧಿಕಾರಿಗಳು ಸರ್ವೇ ವರದಿಯ ಮಾಹಿತಿ ನೀಡುವಾಗ ಖಾಲಿ ಜಾಗ ಎಂದು ತಪ್ಪು ಮಾಹಿತಿಯನ್ನು ನೀಡಿದ್ದಾರೆ.
ಈ ಭೂಮಿಗಳು ಸಾವಿರಾರು ರೈತರ ಜೀವನೋಪಾಯಕ್ಕೆ ಆಧಾರವಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಯಿಂದ ಅವರು ತಮ್ಮ ಜೀವನಾಧಾರ ಕಳೆದುಕೊಳ್ಳುವ ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಈ ಕ್ರಮವು ರೈತರ ಬದುಕಿನ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಸಾಮಾಜಿಕ ಹಾಗೂ ಆರ್ಥಿಕ ಅಶಾಂತಿಗೆ ಕಾರಣವಾಗುವ ಸಾಧ್ಯತೆ ಇದೆ. ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳೀಯ ರೈತರು ಪ್ರತಿಭಟನೆ ಕೈಗೊಂಡಿದ್ದಾರೆ.
ಈ ಹಿನ್ನಲೆಯಲ್ಲಿ, ಸ್ಥಳೀಯ ರೈತರ ಹಿತದೃಷ್ಟಿಯಿಂದ ಹಾಗೂ ಸಾಮಾಜಿಕ ಹಿತಾಸಕ್ತಿಯನ್ನು ಪರಿಗಣಿಸಿ, ಜಮೀನನ್ನು ಸಮೀಕ್ಷೆ ಮಾಡಿ ತಪ್ಪು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಹಾಗೂ 2100 ಎಕರೆ ಕೃಷಿ ಭೂಮಿಯನ್ನು ಕೆ.ಐ.ಎ.ಡಿ.ಬಿ. ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಿ. ಮುಂದಿನ ಕ್ರಮಗಳನ್ನು ಕೈಬಿಡುವಂತೆ ಹಾಗೂ ಈ ವಿಷಯವನ್ನು ಅತ್ಯಂತ ತುರ್ತು ಹಾಗೂ ಗಂಭೀರ ವಿಷಯ ಎಂದು ಪರಿಗಣಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…