Categories: ರಾಜ್ಯ

ಚುನಾವಣಾ ದಿನಾಂಕ ಪ್ರಕಟ; ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಇಂದು ಪ್ರಕಟಗೊಂಡಿದೆ, 224 ವಿಧಾನಸಭೆ ಕ್ಷೇತ್ರಗಳಿಗೆ ಮೇ.10ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮಾ.29ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧಾರ ಮಾಡಲಾಗಿದೆ.

ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ 20 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಮೇ.10 ರ ಬುಧವಾರ ಮತದಾನ ನಡೆಯಲಿದ್ದು, ಮೇ 15 ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಲಾಗಿದೆ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನೂ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು.

ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.

ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ. ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮಾ.29ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜಕೀಯ ನಾಯಕರು, ಪಕ್ಷಗಳು, ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇಕಾಗುತ್ತದೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

11 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago