Categories: ರಾಜ್ಯ

ಚುನಾವಣಾ ದಿನಾಂಕ ಪ್ರಕಟ; ಮೇ.10ಕ್ಕೆ ಮತದಾನ, ಮೇ.13ಕ್ಕೆ ಫಲಿತಾಂಶ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಇಂದು ಪ್ರಕಟಗೊಂಡಿದೆ, 224 ವಿಧಾನಸಭೆ ಕ್ಷೇತ್ರಗಳಿಗೆ ಮೇ.10ರಂದು ಮತದಾನ ನಡೆಯಲಿದ್ದು, ಮೇ.13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮಾ.29ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲು ನಿರ್ಧಾರ ಮಾಡಲಾಗಿದೆ.

ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟ, ಏಪ್ರಿಲ್ 20 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಮೇ.10 ರ ಬುಧವಾರ ಮತದಾನ ನಡೆಯಲಿದ್ದು, ಮೇ 15 ರೊಳಗೆ ಮತದಾನದ ಸಂಪೂರ್ಣ ಪ್ರಕ್ರಿಯೆ ಮುಗಿಯಲಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಲಾಗಿದೆ. ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561 ಇದ್ದು, 2,59,26,319 ಮಹಿಳಾ ಮತದಾರರು ಇದ್ದಾರೆ. ಇನ್ನೂ 4,699 ತೃತೀಯ ಲಿಂಗಿಗಳು ಮತದಾರರು ಇದ್ದು, 12.15 ಲಕ್ಷ ಯುವ ಮತದಾರರು ಇದ್ದಾರೆ.

ಇದೇ ಮೊದಲ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಮಾಹಿತಿ ನೀಡಿದರು.

ಇದೇ ಮೊದಲ ಬಾರಿಗೆ ಮತದಾನ ಮಾಡುವ 18-19 ವಯಸ್ಸಿನ ಮತದಾರರ ಸಂಖ್ಯೆ 9,17,241. ಕರ್ನಾಟಕದಲ್ಲಿ 5.55 ಲಕ್ಷ ವಿಕಲಚೇತನ ಮತದಾರರರು ಇದ್ದಾರೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. 24,063 ನಗರ ಪ್ರದೇಶದಲ್ಲಿ, 34,219 ಗ್ರಾಮೀಣ ಮತಗಟ್ಟೆಗಳು ಸೂಕ್ಷ್ಮ ಮತಗಟ್ಟೆಗಳಾಗಿವೆ.

ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳು ಸೇರಿ ಸರಾಸರಿ 883 ಮತದಾರರಿಗೊಂದು ಮತಗಟ್ಟೆ ನಿರ್ಮಾಣ ಮಾಡಲಾಗುತ್ತದೆ.

ಚುನಾವಣಾ ಆಯೋಗದ ಆ್ಯಪ್‌ನಲ್ಲಿ ಅಭ್ಯರ್ಥಿಗಳ ಸಂಪೂರ್ಣ ವಿವರ ಲಭ್ಯವಿರುತ್ತದೆ. ಅಭ್ಯರ್ಥಿಯ ಅಫಿಡವಿಟ್ ಕೂಡ ಆ್ಯಪ್‌ನಲ್ಲೇ ಲಭ್ಯವಿರಲಿದ್ದು, ಚುನಾವಣಾ ಅಕ್ರಮದ ಬಗ್ಗೆ ಆ್ಯಪ್‌ನಲ್ಲೇ ಮತದಾರರು ದೂರು ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಿದರೆ ಕ್ರಮ ಕೈಗೊಳ್ಳುವುದಾಗಿ ಚುನಾವಣಾ ಆಯೋಗ ಭರವಸೆ ನೀಡಿದೆ. ಚುನಾವಣಾ ಅಕ್ರಮ ತಡೆಗೆ 2400 ತಂಡಗಳ ರಚನೆ ಮಾಡಲಾಗಿದೆ.

ಭಾರತದ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನದ ದಿನಾಂಕಗಳನ್ನು ಪ್ರಕಟಿಸಿರುವ ಹಿನ್ನೆಲೆಯಲ್ಲಿ ಮಾ.29ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ರಾಜಕೀಯ ನಾಯಕರು, ಪಕ್ಷಗಳು, ಅಧಿಕಾರಿಗಳು, ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲರೂ ಈ ನೀತಿಸಂಹಿತೆಗೆ ಬದ್ಧರಾಗಿರಬೇಕಾಗುತ್ತದೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

3 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago