Categories: ಆರೋಗ್ಯ

22 ವರ್ಷದ ಯುವತಿಗೆ ಆಪರೇಷನ್ ಮಾಡಿ, ಎರಡೇ ದಿನದಲ್ಲಿ ಚಲಿಸುವ ಸ್ಥಿತಿಗೆ ತಲುಪಿಸಿದ ಹೃದಯ ತಜ್ಞ‌

ಸುಮಾರು ದಿನಗಳಿಂದ ಎಡಗಾಲಿನಲ್ಲಿ ಊತಕಂಡುಬಂದಿದ್ದ ಕಾರಣ ನಡೆಯಲಾಗದೇ, ಹಾಸಿಗೆಯಲ್ಲೆ ಬಳಲುತ್ತಾ ಇದ್ದ ರೋಗಿಗೆ ಅಪರೇಷನ್‌ ಮಾಡಿ ಎರಡೇ ದಿನದಲ್ಲಿ ಎದ್ದು ಓಡಾಡುವಂತೆ ಮಾಡಿದ್ದಾರೆ ವೈಟ್‌ ಫಿಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ.

22ವರ್ಷದ ಯುವತಿಗೆ ಕಾಲಿನಲ್ಲಿಊತ ಶುರುವಾಗಿದ್ದು, ನೋವಿನಲ್ಲಿ ಬೆಡ್‌ ಇಂದ ಮೇಲೆ ಎಳೆಲು ಕಷ್ಟವಾಗುತ್ತಾ ಇತ್ತು, ಸುಮಾರು 12 ದಿನಗಗಳೀಗೂ ಹೆಚ್ಚು ಕಾಲ ಹಾಸಿಗೆಯಿಂದ ಮೇಲೆಳಲು ಕಷ್ಟ ಪಡುತ್ತಾ ಇದ್ದರು. ಅಷ್ಟೇ ಅಲ್ಲದೇ ನೋವಿನಿಂದ ಉಸಿರಾಟದ ತೊಂದ್ರೆ ಕೂಡ ಶುರುವಾಗಿತ್ತು. ಅವರು ಕೂಡದೇ ಮೆಡಿಕವರ್‌ ಆಸ್ಪತ್ರೆಗೆ ಬಂದು ಡಾ. ರಾಮ್‌ ನರೇಶ್‌ ಸೌದ್ರಿಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು.

ಅವರನ್ನು ಪರೀಕ್ಷೆ ಮಾಡಿದ ಬಳಿಕ ಪಡೆದ ಬಳಿಕ ಎಡ ಗಾಲಿನ ಕಾಲಿನಲ್ಲಿ ರಕ್ತ ಗೆಪ್ಪುಗಟ್ಟಿದ್ದು, ಹೃದಯದಿಂದ ಶ್ವಾಸಕೋಶದ ಪಲ್ಮನರಿವರೆಗೆ ಬ್ಲಾಕೇಜ್‌ ಆಗಿರೋದು ತಿಳಿದುಬಂದಿದೆ. ಅಲ್ಲದೇ ಎಡ ಗಾಲಿನ ರಕ್ತನಾಳ ಸಂಪೂರ್ಣ ಹೆಪ್ಪುಗಟ್ಟಿದ್ದು, ರಕ್ತ ಸಂಚಲನಕ್ಕೆ ಜಾಗ ಇಲ್ಲದೇ ಜಾಮ್‌ ಆಗಿತ್ತು . ಹಾಗಾಗೀ ಶ್ವಾಸಕೋಶದಲ್ಲಿ ರಕ್ತ ಸಂಚಲನ ಫುಲ್‌ ಬಂದ್‌ ಆಗಿತ್ತು. ರಕ್ತ ಕರಗಿಸೋಕೆ ಇಂಜೆಕ್ಚನ್‌ ನೀಡಿದ್ರೂ ರೋಗಿಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬಳಿಕ ಅವರಿಗೆಸಿಟಿ ವಿನೋಗ್ರಾಮ್‌ ನಡೆಸಲಾಯ್ತು, ಅದರಲ್ಲಿ ಅವರಿಗೆ ಥ್ರಂಬೋಸಿಸ್‌ ಖಾಯಿಲೆ ಇರೋದು ತಿಳಿದು ಬಂದಿದೆ. ಅದಕ್ಕಾಗಿ ಪಲ್ಮನರಿ ಎಂಬೋಲೆಕ್ಟಮಿ ಹಾಗೂ ವೀಸನ್‌ ಥ್ರಂಬೆಕ್ಟಮಿ ಅಪರೇಷನ್‌ ಮಾಡಿಸುವ ಅಗತ್ಯತೆಯನ್ನು ಹೃದಯ ತಜ್ಞ ಡಾ ರಾಮ್‌ ನರೇಶ್‌ ಸೌದ್ರಿ ರೋಗಿಗೆ ತಿಳಿಸಿದ್ದಾರೆ.

ರೋಗಿಯ ಸಮಸ್ಯೆಗೆ ಕಾರಣವೇನೆಂದು ಹುಡುಕುತ್ತಾ ಇದ್ದ ವೈದ್ಯರಿಗೆ ತಿಳಿದು ಬಂದಿದ್ದು , ಅವರು ಹಾರ್ಮೋನಲ್‌ ಚಿಕಿತ್ಸೆ ಪಡೆಯುತ್ತಾ ಇದ್ದರು ಅನ್ನೋದು . ಅದರ ಪರಿಣಾಮವಾಗಿ ರೋಗಿಯೂ ಇಷ್ಟೊಂದು ಸಮಸ್ಯೆ ಎದುರಿಸ್ತಾ ಇರೋದು . ಹಾಗಾಗೀ ಅವರಿಗೆ ಅಪರೇಷನ್‌ ನಡೆಸಲಾಯ್ತು . ಮೊದಲಿಗೆ ಶ್ವಾಸಕೋಶದಲ್ಲಿ ಉಂಟಾಗಿರುವ ರಕ್ತದ ಕ್ಲಾಟನ್ನು ತೆಗೆದು ಬಳಿಕ ಐವಿಸಿ ಫಿಲ್ಟರ್‌ ಹಾಕಿ ಎಡಗಾಲಿನಲ್ಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆದು ಹಾಕಿಲಾಯ್ತು. ಬಳಿಕ ಅವರನ್ನು ಐಸಿಯು ಇಂದ ವಾರ್ಡ್‌ಗೆ ಒಂದೇ ದಿನದಲ್ಲಿ ಶಿಫ್ಟ್‌ ಮಾಡಲಾಗಿದೆ . ಮರುದಿನವೇ ಅವರು ಎಂದಿನಂತೆ ನಡೆಯುವುದಕ್ಕೆ ಅವಕಾಶವಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ಯುವತಿಯೂ ತಮ್ಮ ದೈನಂದಿನ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ .

Ramesh Babu

Journalist

Share
Published by
Ramesh Babu

Recent Posts

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

1 hour ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

7 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

9 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

23 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

24 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago