Categories: ಆರೋಗ್ಯ

22 ವರ್ಷದ ಯುವತಿಗೆ ಆಪರೇಷನ್ ಮಾಡಿ, ಎರಡೇ ದಿನದಲ್ಲಿ ದೈನಂದಿನ ಸ್ಥಿತಿಗೆ ಬರುವಂತೆ ಮಾಡಿದ್ದಾರೆ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ‌

ಸುಮಾರು ದಿನಗಳಿಂದ ಎಡಗಾಲಿನಲ್ಲಿ ಊತಕಂಡುಬಂದಿದ್ದ ಕಾರಣ ನಡೆಯಲಾಗದೇ, ಹಾಸಿಗೆಯಲ್ಲೆ ಬಳಲುತ್ತಾ ಇದ್ದ ರೋಗಿಗೆ ಅಪರೇಷನ್‌ ಮಾಡಿ ಎರಡೇ ದಿನದಲ್ಲಿ ಎದ್ದು ಓಡಾಡುವಂತೆ ಮಾಡಿದ್ದಾರೆ ವೈಟ್‌ ಫಿಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ.

22ವರ್ಷದ ಯುವತಿಗೆ ಕಾಲಿನಲ್ಲಿಊತ ಶುರುವಾಗಿದ್ದು, ನೋವಿನಲ್ಲಿ ಬೆಡ್‌ ಇಂದ ಮೇಲೆ ಎಳೆಲು ಕಷ್ಟವಾಗುತ್ತಾ ಇತ್ತು , ಸುಮಾರು 12 ದಿನಗಗಳೀಗೂ ಹೆಚ್ಚು ಕಾಲ ಹಾಸಿಗೆಯಿಂದ ಮೇಲೆಳಲು ಕಷ್ಟ ಪಡುತ್ತಾ ಇದ್ದರು . ಅಷ್ಟೇ ಅಲ್ಲದೇ ನೋವಿನಿಂದ ಉಸಿರಾಟದ ತೊಂದ್ರೆ ಕೂಡ ಶುರುವಾಗಿತ್ತು . ಅವರು ಕೂಡದೇ ಮೆಡಿಕವರ್‌ ಆಸ್ಪತ್ರೆಗೆ ಬಂದು ಡಾ. ರಾಮ್‌ ನರೇಶ್‌ ಸೌದ್ರಿಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು .

ಅವರನ್ನು ಪರೀಕ್ಷೆ ಮಾಡಿದ ಬಳಿಕ ಪಡೆದ ಬಳಿಕ ಅವರ ಎಡ ಗಾಲಿನ ಕಾಲಿನಲ್ಲಿ ರಕ್ತ ಗೆಪ್ಪುಗಟ್ಟಿದ್ದು, ಹೃದಯದಿಂದ ಶ್ವಾಸಕೋಶದ ಪಲ್ಮನರಿವರೆಗೆ ಬ್ಲಾಕೇಜ್‌ ಆಗಿರೋದು ತಿಳಿದುಬಂದಿದೆ. ಅಲ್ಲದೇ ಎಡ ಗಾಲಿನ ರಕ್ತನಾಳ ಸಂಪೂರ್ಣ ಹೆಪ್ಪುಗಟ್ಟಿದ್ದು, ರಕ್ತ ಸಂಚಲನಕ್ಕೆ ಜಾಗ ಇಲ್ಲದೇ ಜಾಮ್‌ ಆಗಿತ್ತು . ಹಾಗಾಗೀ ಶ್ವಾಸಕೋಶದಲ್ಲಿ ರಕ್ತ ಸಂಚಲನ ಫುಲ್‌ ಬಂದ್‌ ಆಗಿತ್ತು. ರಕ್ತ ಕರಗಿಸೋಕೆ ಇಂಜೆಕ್ಚನ್‌ ನೀಡಿದ್ರೂ ರೋಗಿಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬಳಿಕ ಅವರಿಗೆಸಿಟಿ ವಿನೋಗ್ರಾಮ್‌ ನಡೆಸಲಾಯ್ತು, ಅದರಲ್ಲಿ ಅವರಿಗೆ ಥ್ರಂಬೋಸಿಸ್‌ ಖಾಯಿಲೆ ಇರೋದು ತಿಳಿದು ಬಂದಿದೆ. ಅದಕ್ಕಾಗಿ ಪಲ್ಮನರಿ ಎಂಬೋಲೆಕ್ಟಮಿ ಹಾಗೂ ವೀಸನ್‌ ಥ್ರಂಬೆಕ್ಟಮಿ ಅಪರೇಷನ್‌ ಮಾಡಿಸುವ ಅಗತ್ಯತೆಯನ್ನು ಹೃದಯ ತಜ್ಞ ಡಾ ರಾಮ್‌ ನರೇಶ್‌ ಸೌದ್ರಿ ರೋಗಿಗೆ ತಿಳಿಸಿದ್ದಾರೆ.

ರೋಗಿಯ ಸಮಸ್ಯೆಗೆ ಕಾರಣವೇನೆಂದು ಹುಡುಕುತ್ತಾ ಇದ್ದ ವೈದ್ಯರಿಗೆ ತಿಳಿದು ಬಂದಿದ್ದು , ಅವರು ಹಾರ್ಮೋನಲ್‌ ಚಿಕಿತ್ಸೆ ಪಡೆಯುತ್ತಾ ಇದ್ದರು ಅನ್ನೋದು . ಅದರ ಪರಿಣಾಮವಾಗಿ ರೋಗಿಯೂ ಇಷ್ಟೊಂದು ಸಮಸ್ಯೆ ಎದುರಿಸ್ತಾ ಇರೋದು . ಹಾಗಾಗೀ ಅವರಿಗೆ ಅಪರೇಷನ್‌ ನಡೆಸಲಾಯ್ತು . ಮೊದಲಿಗೆ ಶ್ವಾಸಕೋಶದಲ್ಲಿ ಉಂಟಾಗಿರುವ ರಕ್ತದ ಕ್ಲಾಟನ್ನು ತೆಗೆದು ಬಳಿಕ ಐವಿಸಿ ಫಿಲ್ಟರ್‌ ಹಾಕಿ ಎಡಗಾಲಿನಲ್ಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆದು ಹಾಕಿಲಾಯ್ತು. ಬಳಿಕ ಅವರನ್ನು ಐಸಿಯು ಇಂದ ವಾರ್ಡ್‌ಗೆ ಒಂದೇ ದಿನದಲ್ಲಿ ಶಿಫ್ಟ್‌ ಮಾಡಲಾಗಿದೆ . ಮರುದಿನವೇ ಅವರು ಎಂದಿನಂತೆ ನಡೆಯುವುದಕ್ಕೆ ಅವಕಾಶವಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ಯುವತಿಯೂ ತಮ್ಮ ದೈನಂದಿನ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ .

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago