Categories: ಆರೋಗ್ಯ

22 ವರ್ಷದ ಯುವತಿಗೆ ಆಪರೇಷನ್ ಮಾಡಿ, ಎರಡೇ ದಿನದಲ್ಲಿ ದೈನಂದಿನ ಸ್ಥಿತಿಗೆ ಬರುವಂತೆ ಮಾಡಿದ್ದಾರೆ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ‌

ಸುಮಾರು ದಿನಗಳಿಂದ ಎಡಗಾಲಿನಲ್ಲಿ ಊತಕಂಡುಬಂದಿದ್ದ ಕಾರಣ ನಡೆಯಲಾಗದೇ, ಹಾಸಿಗೆಯಲ್ಲೆ ಬಳಲುತ್ತಾ ಇದ್ದ ರೋಗಿಗೆ ಅಪರೇಷನ್‌ ಮಾಡಿ ಎರಡೇ ದಿನದಲ್ಲಿ ಎದ್ದು ಓಡಾಡುವಂತೆ ಮಾಡಿದ್ದಾರೆ ವೈಟ್‌ ಫಿಲ್ಡ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ.

22ವರ್ಷದ ಯುವತಿಗೆ ಕಾಲಿನಲ್ಲಿಊತ ಶುರುವಾಗಿದ್ದು, ನೋವಿನಲ್ಲಿ ಬೆಡ್‌ ಇಂದ ಮೇಲೆ ಎಳೆಲು ಕಷ್ಟವಾಗುತ್ತಾ ಇತ್ತು , ಸುಮಾರು 12 ದಿನಗಗಳೀಗೂ ಹೆಚ್ಚು ಕಾಲ ಹಾಸಿಗೆಯಿಂದ ಮೇಲೆಳಲು ಕಷ್ಟ ಪಡುತ್ತಾ ಇದ್ದರು . ಅಷ್ಟೇ ಅಲ್ಲದೇ ನೋವಿನಿಂದ ಉಸಿರಾಟದ ತೊಂದ್ರೆ ಕೂಡ ಶುರುವಾಗಿತ್ತು . ಅವರು ಕೂಡದೇ ಮೆಡಿಕವರ್‌ ಆಸ್ಪತ್ರೆಗೆ ಬಂದು ಡಾ. ರಾಮ್‌ ನರೇಶ್‌ ಸೌದ್ರಿಯವರನ್ನು ಭೇಟಿ ಮಾಡಿ ಚಿಕಿತ್ಸೆ ಪಡೆದರು .

ಅವರನ್ನು ಪರೀಕ್ಷೆ ಮಾಡಿದ ಬಳಿಕ ಪಡೆದ ಬಳಿಕ ಅವರ ಎಡ ಗಾಲಿನ ಕಾಲಿನಲ್ಲಿ ರಕ್ತ ಗೆಪ್ಪುಗಟ್ಟಿದ್ದು, ಹೃದಯದಿಂದ ಶ್ವಾಸಕೋಶದ ಪಲ್ಮನರಿವರೆಗೆ ಬ್ಲಾಕೇಜ್‌ ಆಗಿರೋದು ತಿಳಿದುಬಂದಿದೆ. ಅಲ್ಲದೇ ಎಡ ಗಾಲಿನ ರಕ್ತನಾಳ ಸಂಪೂರ್ಣ ಹೆಪ್ಪುಗಟ್ಟಿದ್ದು, ರಕ್ತ ಸಂಚಲನಕ್ಕೆ ಜಾಗ ಇಲ್ಲದೇ ಜಾಮ್‌ ಆಗಿತ್ತು . ಹಾಗಾಗೀ ಶ್ವಾಸಕೋಶದಲ್ಲಿ ರಕ್ತ ಸಂಚಲನ ಫುಲ್‌ ಬಂದ್‌ ಆಗಿತ್ತು. ರಕ್ತ ಕರಗಿಸೋಕೆ ಇಂಜೆಕ್ಚನ್‌ ನೀಡಿದ್ರೂ ರೋಗಿಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬಳಿಕ ಅವರಿಗೆಸಿಟಿ ವಿನೋಗ್ರಾಮ್‌ ನಡೆಸಲಾಯ್ತು, ಅದರಲ್ಲಿ ಅವರಿಗೆ ಥ್ರಂಬೋಸಿಸ್‌ ಖಾಯಿಲೆ ಇರೋದು ತಿಳಿದು ಬಂದಿದೆ. ಅದಕ್ಕಾಗಿ ಪಲ್ಮನರಿ ಎಂಬೋಲೆಕ್ಟಮಿ ಹಾಗೂ ವೀಸನ್‌ ಥ್ರಂಬೆಕ್ಟಮಿ ಅಪರೇಷನ್‌ ಮಾಡಿಸುವ ಅಗತ್ಯತೆಯನ್ನು ಹೃದಯ ತಜ್ಞ ಡಾ ರಾಮ್‌ ನರೇಶ್‌ ಸೌದ್ರಿ ರೋಗಿಗೆ ತಿಳಿಸಿದ್ದಾರೆ.

ರೋಗಿಯ ಸಮಸ್ಯೆಗೆ ಕಾರಣವೇನೆಂದು ಹುಡುಕುತ್ತಾ ಇದ್ದ ವೈದ್ಯರಿಗೆ ತಿಳಿದು ಬಂದಿದ್ದು , ಅವರು ಹಾರ್ಮೋನಲ್‌ ಚಿಕಿತ್ಸೆ ಪಡೆಯುತ್ತಾ ಇದ್ದರು ಅನ್ನೋದು . ಅದರ ಪರಿಣಾಮವಾಗಿ ರೋಗಿಯೂ ಇಷ್ಟೊಂದು ಸಮಸ್ಯೆ ಎದುರಿಸ್ತಾ ಇರೋದು . ಹಾಗಾಗೀ ಅವರಿಗೆ ಅಪರೇಷನ್‌ ನಡೆಸಲಾಯ್ತು . ಮೊದಲಿಗೆ ಶ್ವಾಸಕೋಶದಲ್ಲಿ ಉಂಟಾಗಿರುವ ರಕ್ತದ ಕ್ಲಾಟನ್ನು ತೆಗೆದು ಬಳಿಕ ಐವಿಸಿ ಫಿಲ್ಟರ್‌ ಹಾಕಿ ಎಡಗಾಲಿನಲ್ಲಿನ ರಕ್ತನಾಳದಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆದು ಹಾಕಿಲಾಯ್ತು. ಬಳಿಕ ಅವರನ್ನು ಐಸಿಯು ಇಂದ ವಾರ್ಡ್‌ಗೆ ಒಂದೇ ದಿನದಲ್ಲಿ ಶಿಫ್ಟ್‌ ಮಾಡಲಾಗಿದೆ . ಮರುದಿನವೇ ಅವರು ಎಂದಿನಂತೆ ನಡೆಯುವುದಕ್ಕೆ ಅವಕಾಶವಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಸಮಸ್ಯೆ ಇಲ್ಲದೇ ಎಂದಿನಂತೆ ಯುವತಿಯೂ ತಮ್ಮ ದೈನಂದಿನ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಸಂತಸ ವ್ಯಕ್ತಪಡಿಸಿದ ಹೃದಯ ತಜ್ಞ ಡಾ. ರಾಮ್‌ ನರೇಶ್‌ ಸೌದ್ರಿ .

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

7 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

8 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

11 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

20 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago