ತಾಲ್ಲೂಕಿನ ಕುಂಟನಹಳ್ಳಿ, ಬೋಕೀಪುರ ಗ್ರಾಮಗಳಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ 23 ಕುರಿ, ಮೇಕೆಗಳನ್ನು ಕಳವು ಮಾಡಿರುವ ಪ್ರಕರಣ ನಡೆದಿದೆ.
ಬುಲೇರೊ ಸರಕು ಸಾಗಾಣಿಕೆ ವಾಹನದಲ್ಲಿ ಬಂದಿರುವ ಕಳ್ಳರು ಕುಂಟನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿರುವ ಆನಂದಮ್ಮ ಚನ್ನಕೇಶವ ಅವರ ಕೊಟ್ಟಿಗೆಯಲ್ಲಿ ಕೂಡಿದ್ದ 15 ಕರಿಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನದ ನಂಬರ್ ಪ್ಲೇಟ್ ಕಾಣದಂತೆ ಬಟ್ಟೆಯನ್ನು ಸುತ್ತಲಾಗಿದೆ.
ಬೋಕಿಪುರದಲ್ಲಿ ನಾಗರಾಜ್, ಭರತ್ ಅವರು ಸಾಕಿದ್ದ ಕುರಿ, ಮೇಕೆಗಳನ್ನು ಕಳವು ಮಾಡಲಾಗಿದೆ. 2023ರಲ್ಲೂ ಕುರಿ,ಮೇಕೆ, ದನಗಳ ಕಳವು ಮಿತಿ ಮೀರಿತ್ತು. ಕಳ್ಳರ ಹಾವಳಿಗೆ ಬೇಸತ್ತ ರೈತರು ಕುರಿ ,ಮೇಕೆಗಳೊಂದಿಗೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು. ಅದರೂ ಕಳ್ಳರು ಮಾತ್ರ ಪತ್ತೆಯಾಗಿರಲಿಲ್ಲ.
ಈಗ ಮತ್ತೆ ಕುರಿ, ಮೇಕೆಗಳ ಕಳವು ಪ್ರಾರಂಭವಾಗಿದ್ದು ಜನವರಿಯಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ.
ಕಳವು ನಡೆದಿರುವ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…