23 ಕುರಿ, ಮೇಕೆ ಕಳ್ಳತನ: ಕಳವು ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ತಾಲ್ಲೂಕಿನ ಕುಂಟನಹಳ್ಳಿ, ಬೋಕೀಪುರ ಗ್ರಾಮಗಳಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ 23 ಕುರಿ, ಮೇಕೆಗಳನ್ನು ಕಳವು ಮಾಡಿರುವ ಪ್ರಕರಣ ನಡೆದಿದೆ.

ಬುಲೇರೊ ಸರಕು ಸಾಗಾಣಿಕೆ ವಾಹನದಲ್ಲಿ ಬಂದಿರುವ ಕಳ್ಳರು ಕುಂಟನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿರುವ ಆನಂದಮ್ಮ ಚನ್ನಕೇಶವ ಅವರ ಕೊಟ್ಟಿಗೆಯಲ್ಲಿ ಕೂಡಿದ್ದ 15 ಕರಿಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನದ ನಂಬರ್ ಪ್ಲೇಟ್ ಕಾಣದಂತೆ ಬಟ್ಟೆಯನ್ನು ಸುತ್ತಲಾಗಿದೆ.

ಬೋಕಿಪುರದಲ್ಲಿ ನಾಗರಾಜ್, ಭರತ್ ಅವರು ಸಾಕಿದ್ದ ಕುರಿ, ಮೇಕೆಗಳನ್ನು ಕಳವು ಮಾಡಲಾಗಿದೆ. 2023ರಲ್ಲೂ ಕುರಿ,ಮೇಕೆ, ದನಗಳ ಕಳವು ಮಿತಿ ಮೀರಿತ್ತು. ಕಳ್ಳರ ಹಾವಳಿಗೆ ಬೇಸತ್ತ ರೈತರು ಕುರಿ ,ಮೇಕೆಗಳೊಂದಿಗೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು. ಅದರೂ ಕಳ್ಳರು ಮಾತ್ರ ಪತ್ತೆಯಾಗಿರಲಿಲ್ಲ.

ಈಗ ಮತ್ತೆ ಕುರಿ, ಮೇಕೆಗಳ ಕಳವು ಪ್ರಾರಂಭವಾಗಿದ್ದು ಜನವರಿಯಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ.

ಕಳವು ನಡೆದಿರುವ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

8 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

19 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

20 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

23 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago