ತಾಲ್ಲೂಕಿನ ಕುಂಟನಹಳ್ಳಿ, ಬೋಕೀಪುರ ಗ್ರಾಮಗಳಲ್ಲಿ ಭಾನುವಾರ ಬೆಳಗಿನ ಜಾವ ಸುಮಾರು 3 ಗಂಟೆ ಸಮಯದಲ್ಲಿ 23 ಕುರಿ, ಮೇಕೆಗಳನ್ನು ಕಳವು ಮಾಡಿರುವ ಪ್ರಕರಣ ನಡೆದಿದೆ.
ಬುಲೇರೊ ಸರಕು ಸಾಗಾಣಿಕೆ ವಾಹನದಲ್ಲಿ ಬಂದಿರುವ ಕಳ್ಳರು ಕುಂಟನಹಳ್ಳಿ ಗ್ರಾಮದ ಮಧ್ಯಭಾಗದಲ್ಲಿರುವ ಆನಂದಮ್ಮ ಚನ್ನಕೇಶವ ಅವರ ಕೊಟ್ಟಿಗೆಯಲ್ಲಿ ಕೂಡಿದ್ದ 15 ಕರಿಗಳನ್ನು ವಾಹನದಲ್ಲಿ ತುಂಬಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನದ ನಂಬರ್ ಪ್ಲೇಟ್ ಕಾಣದಂತೆ ಬಟ್ಟೆಯನ್ನು ಸುತ್ತಲಾಗಿದೆ.
ಬೋಕಿಪುರದಲ್ಲಿ ನಾಗರಾಜ್, ಭರತ್ ಅವರು ಸಾಕಿದ್ದ ಕುರಿ, ಮೇಕೆಗಳನ್ನು ಕಳವು ಮಾಡಲಾಗಿದೆ. 2023ರಲ್ಲೂ ಕುರಿ,ಮೇಕೆ, ದನಗಳ ಕಳವು ಮಿತಿ ಮೀರಿತ್ತು. ಕಳ್ಳರ ಹಾವಳಿಗೆ ಬೇಸತ್ತ ರೈತರು ಕುರಿ ,ಮೇಕೆಗಳೊಂದಿಗೆ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆಯನ್ನು ನಡೆಸಿದ್ದರು. ಅದರೂ ಕಳ್ಳರು ಮಾತ್ರ ಪತ್ತೆಯಾಗಿರಲಿಲ್ಲ.
ಈಗ ಮತ್ತೆ ಕುರಿ, ಮೇಕೆಗಳ ಕಳವು ಪ್ರಾರಂಭವಾಗಿದ್ದು ಜನವರಿಯಲ್ಲಿ ಇದು ಎರಡನೇ ಕಳವು ಪ್ರಕರಣವಾಗಿದೆ.
ಕಳವು ನಡೆದಿರುವ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…
ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…
ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…