ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ದಿಗೆ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಅಪಾರ-ವಿ.ಎಸ್.ಹೆಗಡೆ

ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್  ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ  ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ   ನಡೆದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದ ಕಾಲದಲ್ಲೇ ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ, ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾರಗೊಳಿದರು ಎಂದರು.

ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್‌ ಅವರು ದೂರದೃಷ್ಟಿಯ ಆಡಳಿತಗಾರರು, ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರು ರಾಜ್ಯದಲ್ಲಿ ಕೈಗಾರಿಕೆ, ನೀರಾವರಿ, ಶಿಕ್ಷಣ, ವಸತಿ ನಿಲಯಗಳು, ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರು. ಮೈಸೂರು ಕೃಷ್ಣರಾಜಸಾಗರದಲ್ಲಿ ಉದ್ಯಾನವನವನ್ನು ನಿರ್ಮಿಸಿ ವಿಶ್ವಖ್ಯಾತಿಗೊಳಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಅಭಿವೃದ್ಧಿಗೆ ಸರ್ ಮಿರ್ಜಾ ಇಸ್ಮಾಯಿಲ್‍ರವರ ಕೊಡುಗೆ ಅಪಾರವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ನವರಿಂದ ಸ್ಥಾಪಿಸಲ್ಪಟ್ಟಂತಹ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದ ನಿವೇಶನವನ್ನು ನೀಡಿ ಬೃಹತ್ ಮಂದಿರವನ್ನು ನಿರ್ಮಾಣ ಮಾಡಲು ಸರ್ ಮಿರ್ಜಾ ಇಸ್ಮಾಯಿಲ್ ಸಂಪೂರ್ಣ ಸಹಕಾರ ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ದೇವಾಂಗ ಮಂಡಳಿ ನಿರ್ದೇಶಕ ಕೆ.ಎಸ್.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ್ತ ಆಯುಕ್ತ ವೆಂಕಟರಾಜು, ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಕವಿತಾ, ನೃತ್ಯ ತರಬೇತಿಗಾರ್ತಿ ತೇಜಸ್ವಿನಿ, ಪತ್ರಕರ್ತ ಕೃಷ್ಣಪ್ರಸಾದ್, ಲಕ್ಷ್ಮೀನಾರಾಯಣ ಮತ್ತು ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

10 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

10 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

13 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

16 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

19 hours ago