ದೊಡ್ಡಬಳ್ಳಾಪುರ ಸಮಗ್ರ ಅಭಿವೃದ್ದಿಗೆ ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಅಪಾರ-ವಿ.ಎಸ್.ಹೆಗಡೆ

ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್  ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ  ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ   ನಡೆದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ಇಸ್ಮಾಯಿಲ್ ಅವರು ದಿವಾನರಾಗಿದ್ದ ಕಾಲದಲ್ಲೇ ದೊಡ್ಡಬಳ್ಳಾಪುರಕ್ಕೆ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ, ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ಸಕಾರಗೊಳಿದರು ಎಂದರು.

ದಿವಾನ್ ಸರ್ ಮಿರ್ಜಾ ಇಸ್ಮಾಯಿಲ್‌ ಅವರು ದೂರದೃಷ್ಟಿಯ ಆಡಳಿತಗಾರರು, ತಮ್ಮ ಅಧಿಕಾರದ ಅವಧಿಯಲ್ಲಿ ಮೈಸೂರು ರಾಜ್ಯದಲ್ಲಿ ಕೈಗಾರಿಕೆ, ನೀರಾವರಿ, ಶಿಕ್ಷಣ, ವಸತಿ ನಿಲಯಗಳು, ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರು. ಮೈಸೂರು ಕೃಷ್ಣರಾಜಸಾಗರದಲ್ಲಿ ಉದ್ಯಾನವನವನ್ನು ನಿರ್ಮಿಸಿ ವಿಶ್ವಖ್ಯಾತಿಗೊಳಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ,
ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಅಭಿವೃದ್ಧಿಗೆ ಸರ್ ಮಿರ್ಜಾ ಇಸ್ಮಾಯಿಲ್‍ರವರ ಕೊಡುಗೆ ಅಪಾರವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಸರ್ ಎಂ ವಿಶ್ವೇಶ್ವರಯ್ಯ ನವರಿಂದ ಸ್ಥಾಪಿಸಲ್ಪಟ್ಟಂತಹ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದ ನಿವೇಶನವನ್ನು ನೀಡಿ ಬೃಹತ್ ಮಂದಿರವನ್ನು ನಿರ್ಮಾಣ ಮಾಡಲು ಸರ್ ಮಿರ್ಜಾ ಇಸ್ಮಾಯಿಲ್ ಸಂಪೂರ್ಣ ಸಹಕಾರ ನೀಡಿದರು ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ದೇವಾಂಗ ಮಂಡಳಿ ನಿರ್ದೇಶಕ ಕೆ.ಎಸ್.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ್ತ ಆಯುಕ್ತ ವೆಂಕಟರಾಜು, ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಕವಿತಾ, ನೃತ್ಯ ತರಬೇತಿಗಾರ್ತಿ ತೇಜಸ್ವಿನಿ, ಪತ್ರಕರ್ತ ಕೃಷ್ಣಪ್ರಸಾದ್, ಲಕ್ಷ್ಮೀನಾರಾಯಣ ಮತ್ತು ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

2 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

7 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

8 hours ago

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 day ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

1 day ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

1 day ago