24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಕಳವುಗೊಂಡ ಚಿನ್ನದ ಸರ ಸೇರಿದಂತೆ ಒಟ್ಟು ₹2.96 ಲಕ್ಷ ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಜೂನ್ 22ರಂದು ಉಮೇಶ್ ಕೆ ಅವರು ನೀಡಿದ ದೂರಿನ ಮೇರೆಗೆ, ಅವರ ಕತ್ತಿನಲ್ಲಿದ್ದ 14 ಗ್ರಾಂ ತೂಕದ ಚಿನ್ನದ ಸರವನ್ನು ಕಳ್ಳರು ಕಿತ್ತುಕೊಂಡಿರುವ ಬಗ್ಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.

ಜೂನ್ 22ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸರಗಳ್ಳತನ ಸಂಬಂಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚಂದ್ರಕಾಂತ್ ಎಂ.ವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ವೆಂಕಟೇಶ್ವರ ಪ್ರಸನ್ನ ಹಾಗೂ ಲಕ್ಷ್ಮೀನಾರಾಯಣ್ ಎ.ವಿ, ಮತ್ತು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿತ್ತು.

ತನಿಖೆಯ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಪಾಲನ ಜೋಗಿಹಳ್ಳಿ ಗ್ರಾಮದ ನಿವಾಸಿಗಳಾಗಿದ ಆಕಾಶ್ (20) ಹಾಗೂ ಸುಮನ್ (20) ಅವರನ್ನು ಬಂಧಿಸಲಾಗಿದೆ. ಬಂಧಿತರಿಂದ 14 ಗ್ರಾಂ ತೂಕದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ ಡಿಯೋ ಬೈಕ್ ಸೇರಿದಂತೆ ಒಟ್ಟು ₹2.96 ಲಕ್ಷ ಮೌಲ್ಯದ ಮಾಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ. ನೇತೃತ್ವದ ತಂಡದ ಸಿಬ್ಬಂದಿ ಪಿಎಸ್‌ಐ ನಾರಾಯಣಸ್ವಾಮಿ, ಪ್ರೊಬೇಷನರಿ ಪಿಎಸ್‌ಐ ಸುಮಂತ್, ಹೆಡ್ ಕಾನ್ಸ್‌ಟೇಬಲ್‌ಗಳಾದ ರಂಗನಾಥ್, ಸುನಿಲ್ ಭಾಸಗಿ, ಹರೀಶ್, ಮಂಜುನಾಥ್, ಚಂದ್ರಶೇಖರ್, ಎಎಚ್‌ಸಿ ನಟರಾಜು, ಸಚಿನ್ ಉಪ್ಪಾರ ಹಾಗೂ ತಾಂತ್ರಿಕ ಸಿಬ್ಬಂದಿ ಪ್ರಮುಖ ಪಾತ್ರವಹಿಸಿದ್ದಾರೆ.

ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಪ್ರಕರಣವನ್ನು ಶೀಘ್ರವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

8 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

13 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

17 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

20 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago