Categories: ರಾಜ್ಯ

24 ನೂತನ ಸಚಿವರ ಪಟ್ಟಿ ರಿಲೀಸ್: ಯಾರಿಗೆಲ್ಲಾ ಸಚಿವ ಸ್ಥಾನ? ಇಲ್ಲಿದೆ 24 ಸಚಿವರ ಪಟ್ಟಿ….

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಇಂದು ವಿಸ್ತರಣೆಯಾಗುವ ಸಾಧ್ಯತೆ ಇದೆ, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಇಂದು ಪ್ರಮಾಣವಚನ ಸ್ವೀಕರಿಸಲಿರುವ 24 ನೂತನ ಸಚಿವ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ.

ಸಂಪುಟ ವಿಸ್ತರಣೆ ಕುರಿತು ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ತೀವ್ರ ಕಸರತ್ತು ನಡೆಸಿದ್ದ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಇಂದು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 24 ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಾತಿವಾರು ಮತ್ತು ಪ್ರಾದೇಶಿಕ ಪ್ರಾತಿನಿಧ್ಯದ ಜತೆಗೆ ಸಾಮಾಜಿಕ ನ್ಯಾಯದ ಮಾನದಂಡದಲ್ಲಿ ಹಿರಿಯ ಹಾಗೂ ಕಿರಿಯ ಶಾಸಕರುಗಳನ್ನು ಸಚಿವ ಸಂಪುಟಕ್ಕೆ ಆಯ್ಕೆ ಮಾಡಿಕೊಳ್ಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮತೋಲನ ಮೆರೆದಿದ್ದಾರೆ.

ನೂತನ ಸಚಿವರ ಪಟ್ಟಿ

1.ಎಚ್.ಕೆ.ಪಾಟೀಲ್
2.ಕೃಷ್ಣ ಭೈರೇಗೌಡ
3.ಚಲುವರಾಯಸ್ವಾಮಿ
4.ಕೆ ವೆಂಕಟೇಶ್
5.ಎಚ್.ಸಿ.ಮಹದೇವಪ್ಪ
6.ಈಶ್ವರ ಖಂಡ್ರೆ
7.ಕೆ.ಎನ್.ರಾಜಣ್ಣ
8.ದಿನೇಶ್ ಗುಂಡೂರಾವ್
9.ಶರಣಬಸಪ್ಪ ದರ್ಶನಾಪುರ
10.ಶಿವಾನಂದ ಪಾಟೀಲ್
11.ಆರ್.ಬಿ.ತಿಮ್ಮಾಪುರ
12.ಎಸ್.ಎಸ್.ಮಲ್ಲಿಕಾರ್ಜುನ,
13.ಶಿವರಾಜ ತಂಗಡಗಿ
14.ಡಾ.ಶರಣ ಪ್ರಕಾಶ್ ಪಾಟೀಲ್
15.ಮಂಕಾಳು ವೈದ್ಯ,
16.ಲಕ್ಷ್ಮೀ ಹೆಬ್ಬಾಳ್ಕರ್​
17.ರಹೀಂ ಖಾನ್
18.ಡಿ.ಸುಧಾಕರ್
19.ಸಂತೋಷ್ ಲಾಡ್​
20.ಬೋಸರಾಜು
21.ಬಿ.ಎಸ್.ಸುರೇಶ್
22.ಮಧು ಬಂಗಾರಪ್ಪ
23.ಎಂ.ಸಿ.ಸುಧಾಕರ್
24.ಬಿ.ನಾಗೇಂದ್ರ

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

13 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago