ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

8 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

16 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago