ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

3 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

4 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

5 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

5 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

9 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

17 hours ago