ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

1 hour ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

9 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

9 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

22 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

24 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

24 hours ago