ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

17 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago