ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago