ಪಾರಂಪರಿಕ ಮಟ್ಟಿ‌ ಕುಸ್ತಿ ಕಲೆಯನ್ನ ಮುಂದಿನ ಪೀಳಿಗೆಗೆ ಪರಿಚಯಿಸಬೇಕು -ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್


ನಮ್ಮ ಪಾರಂಪರಿಕ ಕ್ರೀಡೆಯಾದ ಕುಸ್ತಿಯನ್ನು ಜನಪ್ರಿಯಗೊಳಿಸಿ, ಇಂದಿನ ಹಾಗೂ ಮುಂದಿನ ಪೀಳಿಗೆಗೆ ಕುಸ್ತಿ ಕಲೆಯನ್ನು ಕಲಿಸುವ ಸಲುವಾಗಿ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದ್ದು, ‌ಇದೇ ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಬಯಲು ಬಸವಣ್ಣ ಕಡಲೇಕಾಯಿ ಪರಿಷೆ ಇದ್ದು, ಇದರ ಅಂಗವಾಗಿ 9 ಜಿಲ್ಲೆಗಳ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ತಾಲೂಕು ದಶಕಗಳಿಂದ ಕುಸ್ತಿ ಕಲೆಗೆ ಹೆಸರುವಾಸಿಯಾಗಿದ್ದು, ಮೈಸೂರಿನಲ್ಲಿ ನಡೆಯುವ ಕುಸ್ತಿ ಪಂದ್ಯಾವಳಿಗಳಲ್ಲಿ ಇಂದಿನ ಕುಸ್ತಿ ಪಟುಗಳು ಭಾಗವಹಿಸಿ, ಬಹುಮಾನ ಗಳಿಸಿದ್ದಾರೆ. ಕುಸ್ತಿ ಕಲೆಗೆ ಉತ್ತೇಜಿನ ನೀಡುವ ಸಲುವಾಗಿ ತಾಲೂಕಿನ ಗರಡಿ ಮನೆಗಳ ಸಹಕಾರದೊಂದಿಗೆ ತಾಲೂಕು ಕುಸ್ತಿ ಸಂಘ ಸ್ಥಾಪಿಸಲಾಗಿದೆ ಎಂದರು.

ನ.25ರ ಪಂದ್ಯಾವಳಿಗಳನ್ನು ನಡೆಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಇನ್ನು ಮುಂದೆ ಸಂಘದಿಂದ ಪಂದ್ಯಾವಳಿಗಳಷ್ಟೇ ಅಲ್ಲದೇ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಕುಸ್ತಿ ತರಬೇತಿಯನ್ನು ನೀಡಲಾಗುವುದು ಎಂದರು.

ಸಂಘದ ಗೌ.ಅಧ್ಯಕ್ಷ ಪೈಲ್ವಾನ್ ಚೌಡಪ್ಪ ಮಾತನಾಡಿ, ಮಟ್ಟಿ ಕುಸ್ತಿ ಕಲೆ ನಮ್ಮ ತಲೆಮಾರಿಗೆ ಕೊನೆಯಾಗುವುದು ಬೇಡ. ಇಂದಿನ ಹಾಗೂ ಮುಂದಿನ ಪೀಳಿಗೆಗೂ ಗರಡಿ ಮನೆಗಳ ಪರಿಚಯವಾಗಬೇಕು. ಇಂದಿನ ಪೀಳಿಗೆ ಕುಸ್ತಿ ಕಲಿತರೆ ಸಾಕಷ್ಟು ಪ್ರಯೋಜನಗಳಿವೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡುವ ಅವಕಾಶಗಳಿವೆ. ಈ ದಿಸೆಯಲ್ಲಿ ಆಯೋಜಿಸುತ್ತಿರುವ ಈ ಕುಸ್ತಿ ಪಂದ್ಯಾವಳಿಗಳನ್ನು ನಮ್ಮ ಜನ ಪ್ರೋತ್ಸಾಹಿಸಬೇಕಿದೆ ಎಂದರು.

ಸಂಘದ ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ಗಣೇಶ್ ರಾಜಘಟ್ಟ,ಕುಸ್ತಿ ಪಂದ್ಯಾವಳಿಗಳ ಮಾಹಿತಿ ನೀಡಿ, ನ.25ರಂದು ಬೆಳಿಗ್ಗೆ 10 ಗಂಟೆಯಿಂದ ಕೊಂಗಾಡಿಯಪ್ಪ ಕಾಲೇಜು ರಸ್ತೆ ಬಯಲು ಬಸವಣ್ಣ ದೇವಾಲಯದ ಮುಂಭಾಗದ ಬಯಲಿನಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದರು.

ಕುಸ್ತಿಪಟುಗಳ ತೂಕಗಳ ಮಾನದಂಡಕ್ಕೆ ಅನುಸಾರವಾಗಿ, ದೊಡ್ಡಬಳ್ಳಾಪುರ ಯುವ ಕಿಶೋರ, ದೊಡ್ಡಬಳ್ಳಾಪುರ ಕಿಶೋರ, ದೊಡ್ಡಬಳ್ಳಾಪುರ ಕುಮಾರ, ದೊಡ್ಡಬಳ್ಳಾಪುರ ಕೇಸರಿ, ದೊಡ್ಡಬಳ್ಳಾಪುರ ಕಂಠೀರವ, ಹಾಗೂ ಮಹಿಳಾ ವಿಭಾಗದಲ್ಲಿ (60 ಕೆ.ಜಿ. ಒಳಗಿನ ವಿಭಾಗ) ದೊಡ್ಡಬಳ್ಳಾಪುರ ಕಿಶೋರಿ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿವೆ. ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಮತ್ತು ಚಾಮರಾಜನಗರ 9 ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಲಿದ್ದು, ಈಗಾಗಲೇ ಸುತ್ತೋಲೆ ಕಳುಹಿಸಲಾಗಿದೆ ಎಂದು ಹೇಳಿದರು.

ಕುಸ್ತಿ ಪಂದ್ಯಾವಳಿಗಳು ಸಾಂಪ್ರದಾಯಿಕ ಮಣ್ಣಿನ ಅಖಾಡ (ಮಟ್ಟಿ)ದಲ್ಲಿ ನಡೆಯಲಿವೆ. ಕುಸ್ತಿ ಪಂದ್ಯಾವಳಿಗಳನ್ನು ಅಂತಾರಾಷ್ಟ್ರೀಯ ನಿಯಮಗಳ ಅನುಸಾರ ಅಂಕಗಳ ಆಧಾರದಲ್ಲಿ ನಡೆಸಲಾಗುವುದು. ಕುಸ್ತಿ ಪಟುಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ಸಂಖ್ಯೆ 9964335160 ಅಥವಾ 9036183498 ಗೆ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕುಸ್ತಿ ಸಂಘದ ಗೌ.ಅಧ್ಯಕ್ಷ ಪಿಳ್ಳಣ್ಣ, ಉಪಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಸ್.ಪದ್ಮನಾಭ್, ಖಜಾಂಚಿ ವಿಶ್ವನಾಥ್, ಸಂಘದ ಮುನಿವೆಂಕಟೇಶ್, ಸುಬ್ಬು, ಅರುಣ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

20 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago