ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ ನೋಡಿದ ವಿದ್ಯಾರ್ಥಿಗಳೆಂದರೆ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಮಾತ್ರ ಎಂದು ನಿವೃತ್ತ ದೈಹಿಕ ಶಿಕ್ಷಕ ವಿಶ್ವನಾಥ್ ಗೌಡ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಗುರುಗಳಿಗೆ ಪಾದಪೂಜೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾನು ಓದಿದ ಶಾಲೆಗೆ ಸುಮಾರು 50,000 ಮೌಲ್ಯದ ಶಾಲಾ ಪರಿಕರಗಳನ್ನು ನೀಡಿ ತಮ್ಮ ನೆಚ್ಚಿನ ಗುರುಗಳನ್ನು 25 ವರ್ಷದ ನಂತರ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಮಂಗಳವಾದ್ಯಗಳೊಂದಿಗೆ ಕರೆತಂದು ಪಾದಪೂಜೆ ನೆರವೇರಿಸಿದ ಸಂಸ್ಕೃತಿ ಉಳಿದಿರುವುದು ಅಂದಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದರು
ಮತ್ತೊಬ್ಬ ಶಿಕ್ಷಕಿ ಶೋಭಾ ಮಾತನಾಡಿ, ನಾನೊಬ್ಬ ವಿಜ್ಞಾನ ಶಿಕ್ಷಕಿಯಾಗಿ ವಿಜ್ಞಾನವನ್ನು ಬರಿ ಪ್ರಗತಿಗಷ್ಟೇ ಬಳಸಬೇಕು ನಾವು ನಮ್ಮ ನಿತ್ಯ ಜೀವನವನ್ನು ಉತ್ತಮ ಪರಿಸರದೊಂದಿಗೆ ಜೀವನ ಕಳೆಯಬೇಕು ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ ಎಲ್ಲರೂ ನಾವು ಹಚ್ಚಿರುವ ದೀಪ ಸುಂದರವಾಗಿ ಬೆಳಗುತ್ತಿದೆ ಎಂದರೆ ಅದು ನಾವು ನೀಡಿದ ಸಂಸ್ಕಾರದಿಂದ ಮಾತ್ರ ಇಂದಿನ ಮಕ್ಕಳ ಶಿಕ್ಷಕರ ಬಾಂಧವ್ಯ ಕ್ಷೀಣಿಸುತ್ತಿದೆ ಇಂದು ನೀಡಿದ ಗೌರವ ಯಾವುದೇ ಪ್ರಶಸ್ತಿಗೂ, ಊಹಿಸಲು ಸಾಧ್ಯವಿಲ್ಲದ ಗೌರವವಾಗಿದೆ ನಮ್ಮ ಶಿಕ್ಷಕ ವೃತ್ತಿ ನಮಗೆ ಸಾರ್ಥಕ ಮನೋಭಾವನೆಯನ್ನು ಬೆಳೆಸಿದೆ ಎಂದರು.
ಮತ್ತೊಬ್ಬ ನಿವೃತ್ತ ಮುಖ್ಯ ಶಿಕ್ಷಕ ಜಿಎಂ ಮುನಿಕೃಷ್ಣಪ್ಪ ಮಾತನಾಡಿ, ನನ್ನ 30 ವರ್ಷಗಳ ಸೇವಾ ಅವಧಿಯಲ್ಲಿ 20 ವರ್ಷಗಳು ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದೇನೆ ಇಂತಹ ತೃಪ್ತಿ ನನಗೆ ಬೇರೆ ಯಾವುದೇ ಶಾಲೆಗಳಲ್ಲೂ ದೊರೆತಿಲ್ಲ ಈ ಬ್ಯಾಚಿನ ಹಳೆಯ ವಿದ್ಯಾರ್ಥಿಗಳ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಶಿಕ್ಷಕಿ ರೇಣುಕಾ ಭಟ್,ಇಂದಿರಾ, ಶೈಲಜಾ ಹಾಗೂ ನಿವೃತ್ತ ಹಿರಿಯ ಶಿಕ್ಷಕ ಅನಂತ ಪದ್ಮನಾಭ ಶರ್ಮಾ, ಎ.ಆರ್. ಸುಬ್ಬರಾವ್ .ಸಿ.ಕೆ.ಕೃಷ್ಣಪ್ಪ ನಾರಾಯಣಪ್ಪ ಮಂಜುನಾಥ್ ಗುಮಾಸ್ತರಾದ ಭಾಗ್ಯಮ್ಮ ಹಳೆ ವಿದ್ಯಾರ್ಥಿಗಳಾದ ನವೀನ್, ಸುಬ್ರಹ್ಮಣ್ಯ, ಟಿ.ಡಿ.ರವಿಕುಮಾರ್, ಸಂಪತ್, ವೆಂಕಟೇಶ್, ಗಂಗರಾಜು. ಮೃತ್ಯುಂಜಯ, ಎನ್. ಶಿವಕುಮಾರ್, ಮಮತಾ, ಚೈತ್ರ,ಪಾರ್ವತಿ, ಸೇರಿದಂತೆ ನೂರ ಹತ್ತು ಹಳೆ ವಿದ್ಯಾರ್ಥಿಗಳು ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…