25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ ನೋಡಿದ ವಿದ್ಯಾರ್ಥಿಗಳೆಂದರೆ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಮಾತ್ರ ಎಂದು ನಿವೃತ್ತ ದೈಹಿಕ ಶಿಕ್ಷಕ ವಿಶ್ವನಾಥ್ ಗೌಡ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಗುರುಗಳಿಗೆ ಪಾದಪೂಜೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾನು ಓದಿದ ಶಾಲೆಗೆ ಸುಮಾರು 50,000 ಮೌಲ್ಯದ ಶಾಲಾ ಪರಿಕರಗಳನ್ನು ನೀಡಿ ತಮ್ಮ ನೆಚ್ಚಿನ ಗುರುಗಳನ್ನು 25 ವರ್ಷದ ನಂತರ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಮಂಗಳವಾದ್ಯಗಳೊಂದಿಗೆ ಕರೆತಂದು ಪಾದಪೂಜೆ ನೆರವೇರಿಸಿದ ಸಂಸ್ಕೃತಿ ಉಳಿದಿರುವುದು ಅಂದಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದರು

ಮತ್ತೊಬ್ಬ ಶಿಕ್ಷಕಿ ಶೋಭಾ ಮಾತನಾಡಿ, ನಾನೊಬ್ಬ ವಿಜ್ಞಾನ ಶಿಕ್ಷಕಿಯಾಗಿ ವಿಜ್ಞಾನವನ್ನು ಬರಿ ಪ್ರಗತಿಗಷ್ಟೇ ಬಳಸಬೇಕು ನಾವು ನಮ್ಮ ನಿತ್ಯ ಜೀವನವನ್ನು ಉತ್ತಮ ಪರಿಸರದೊಂದಿಗೆ ಜೀವನ ಕಳೆಯಬೇಕು ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ ಎಲ್ಲರೂ ನಾವು ಹಚ್ಚಿರುವ ದೀಪ ಸುಂದರವಾಗಿ ಬೆಳಗುತ್ತಿದೆ ಎಂದರೆ ಅದು ನಾವು ನೀಡಿದ ಸಂಸ್ಕಾರದಿಂದ ಮಾತ್ರ ಇಂದಿನ ಮಕ್ಕಳ ಶಿಕ್ಷಕರ ಬಾಂಧವ್ಯ ಕ್ಷೀಣಿಸುತ್ತಿದೆ ಇಂದು ನೀಡಿದ ಗೌರವ ಯಾವುದೇ ಪ್ರಶಸ್ತಿಗೂ, ಊಹಿಸಲು ಸಾಧ್ಯವಿಲ್ಲದ ಗೌರವವಾಗಿದೆ ನಮ್ಮ ಶಿಕ್ಷಕ ವೃತ್ತಿ ನಮಗೆ ಸಾರ್ಥಕ ಮನೋಭಾವನೆಯನ್ನು ಬೆಳೆಸಿದೆ ಎಂದರು.

ಮತ್ತೊಬ್ಬ ನಿವೃತ್ತ ಮುಖ್ಯ ಶಿಕ್ಷಕ ಜಿಎಂ ಮುನಿಕೃಷ್ಣಪ್ಪ ಮಾತನಾಡಿ, ನನ್ನ 30 ವರ್ಷಗಳ ಸೇವಾ ಅವಧಿಯಲ್ಲಿ 20 ವರ್ಷಗಳು ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದೇನೆ ಇಂತಹ ತೃಪ್ತಿ ನನಗೆ ಬೇರೆ ಯಾವುದೇ ಶಾಲೆಗಳಲ್ಲೂ ದೊರೆತಿಲ್ಲ ಈ ಬ್ಯಾಚಿನ ಹಳೆಯ ವಿದ್ಯಾರ್ಥಿಗಳ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಶಿಕ್ಷಕಿ ರೇಣುಕಾ ಭಟ್,ಇಂದಿರಾ, ಶೈಲಜಾ ಹಾಗೂ ನಿವೃತ್ತ ಹಿರಿಯ ಶಿಕ್ಷಕ ಅನಂತ ಪದ್ಮನಾಭ ಶರ್ಮಾ, ಎ.ಆರ್. ಸುಬ್ಬರಾವ್ .ಸಿ.ಕೆ.ಕೃಷ್ಣಪ್ಪ ನಾರಾಯಣಪ್ಪ ಮಂಜುನಾಥ್ ಗುಮಾಸ್ತರಾದ ಭಾಗ್ಯಮ್ಮ ಹಳೆ ವಿದ್ಯಾರ್ಥಿಗಳಾದ ನವೀನ್, ಸುಬ್ರಹ್ಮಣ್ಯ, ಟಿ.ಡಿ.ರವಿಕುಮಾರ್, ಸಂಪತ್, ವೆಂಕಟೇಶ್, ಗಂಗರಾಜು. ಮೃತ್ಯುಂಜಯ, ಎನ್. ಶಿವಕುಮಾರ್, ಮಮತಾ, ಚೈತ್ರ,ಪಾರ್ವತಿ, ಸೇರಿದಂತೆ ನೂರ ಹತ್ತು ಹಳೆ ವಿದ್ಯಾರ್ಥಿಗಳು ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

20 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

22 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago