ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ ನೋಡಿದ ವಿದ್ಯಾರ್ಥಿಗಳೆಂದರೆ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ಮಾತ್ರ ಎಂದು ನಿವೃತ್ತ ದೈಹಿಕ ಶಿಕ್ಷಕ ವಿಶ್ವನಾಥ್ ಗೌಡ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢಶಾಲೆಯ 2001-02ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಗುರುಗಳಿಗೆ ಪಾದಪೂಜೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಾನು ಓದಿದ ಶಾಲೆಗೆ ಸುಮಾರು 50,000 ಮೌಲ್ಯದ ಶಾಲಾ ಪರಿಕರಗಳನ್ನು ನೀಡಿ ತಮ್ಮ ನೆಚ್ಚಿನ ಗುರುಗಳನ್ನು 25 ವರ್ಷದ ನಂತರ ಭೇಟಿ ಮಾಡಿ ಕಾರ್ಯಕ್ರಮಕ್ಕೆ ಮಂಗಳವಾದ್ಯಗಳೊಂದಿಗೆ ಕರೆತಂದು ಪಾದಪೂಜೆ ನೆರವೇರಿಸಿದ ಸಂಸ್ಕೃತಿ ಉಳಿದಿರುವುದು ಅಂದಿನ ವಿದ್ಯಾರ್ಥಿಗಳಿಗೆ ಮಾತ್ರ ಎಂದರು
ಮತ್ತೊಬ್ಬ ಶಿಕ್ಷಕಿ ಶೋಭಾ ಮಾತನಾಡಿ, ನಾನೊಬ್ಬ ವಿಜ್ಞಾನ ಶಿಕ್ಷಕಿಯಾಗಿ ವಿಜ್ಞಾನವನ್ನು ಬರಿ ಪ್ರಗತಿಗಷ್ಟೇ ಬಳಸಬೇಕು ನಾವು ನಮ್ಮ ನಿತ್ಯ ಜೀವನವನ್ನು ಉತ್ತಮ ಪರಿಸರದೊಂದಿಗೆ ಜೀವನ ಕಳೆಯಬೇಕು ಆದ್ದರಿಂದ ನಿಮ್ಮ ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯವನ್ನು ಕಾಪಾಡಲು ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಿ ಎಲ್ಲರೂ ನಾವು ಹಚ್ಚಿರುವ ದೀಪ ಸುಂದರವಾಗಿ ಬೆಳಗುತ್ತಿದೆ ಎಂದರೆ ಅದು ನಾವು ನೀಡಿದ ಸಂಸ್ಕಾರದಿಂದ ಮಾತ್ರ ಇಂದಿನ ಮಕ್ಕಳ ಶಿಕ್ಷಕರ ಬಾಂಧವ್ಯ ಕ್ಷೀಣಿಸುತ್ತಿದೆ ಇಂದು ನೀಡಿದ ಗೌರವ ಯಾವುದೇ ಪ್ರಶಸ್ತಿಗೂ, ಊಹಿಸಲು ಸಾಧ್ಯವಿಲ್ಲದ ಗೌರವವಾಗಿದೆ ನಮ್ಮ ಶಿಕ್ಷಕ ವೃತ್ತಿ ನಮಗೆ ಸಾರ್ಥಕ ಮನೋಭಾವನೆಯನ್ನು ಬೆಳೆಸಿದೆ ಎಂದರು.
ಮತ್ತೊಬ್ಬ ನಿವೃತ್ತ ಮುಖ್ಯ ಶಿಕ್ಷಕ ಜಿಎಂ ಮುನಿಕೃಷ್ಣಪ್ಪ ಮಾತನಾಡಿ, ನನ್ನ 30 ವರ್ಷಗಳ ಸೇವಾ ಅವಧಿಯಲ್ಲಿ 20 ವರ್ಷಗಳು ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ್ದೇನೆ ಇಂತಹ ತೃಪ್ತಿ ನನಗೆ ಬೇರೆ ಯಾವುದೇ ಶಾಲೆಗಳಲ್ಲೂ ದೊರೆತಿಲ್ಲ ಈ ಬ್ಯಾಚಿನ ಹಳೆಯ ವಿದ್ಯಾರ್ಥಿಗಳ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಕನ್ನಡ ಶಿಕ್ಷಕಿ ರೇಣುಕಾ ಭಟ್,ಇಂದಿರಾ, ಶೈಲಜಾ ಹಾಗೂ ನಿವೃತ್ತ ಹಿರಿಯ ಶಿಕ್ಷಕ ಅನಂತ ಪದ್ಮನಾಭ ಶರ್ಮಾ, ಎ.ಆರ್. ಸುಬ್ಬರಾವ್ .ಸಿ.ಕೆ.ಕೃಷ್ಣಪ್ಪ ನಾರಾಯಣಪ್ಪ ಮಂಜುನಾಥ್ ಗುಮಾಸ್ತರಾದ ಭಾಗ್ಯಮ್ಮ ಹಳೆ ವಿದ್ಯಾರ್ಥಿಗಳಾದ ನವೀನ್, ಸುಬ್ರಹ್ಮಣ್ಯ, ಟಿ.ಡಿ.ರವಿಕುಮಾರ್, ಸಂಪತ್, ವೆಂಕಟೇಶ್, ಗಂಗರಾಜು. ಮೃತ್ಯುಂಜಯ, ಎನ್. ಶಿವಕುಮಾರ್, ಮಮತಾ, ಚೈತ್ರ,ಪಾರ್ವತಿ, ಸೇರಿದಂತೆ ನೂರ ಹತ್ತು ಹಳೆ ವಿದ್ಯಾರ್ಥಿಗಳು ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…