25.42 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ: ಕಾಮಗಾರಿ ಪರಿಶೀಲಿಸಿದ ಸಂಸದ ಡಾ.ಕೆ ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಇಂದು ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ 25.42 ಕೋಟಿ ವೆಚ್ಚದಲ್ಲಿ ಪುನರಾಭಿವೃದ್ಧಿಗೊಳ್ಳುತ್ತಿರುವ ನಿಲ್ದಾಣದ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆ-2 ಅಡಿಯಲ್ಲಿ ರೈಲ್ವೆ ನಿಲ್ದಾಣ ನವೀಕರಣ ಮತ್ತು ಪುನರಾಭಿವೃದ್ಧಿಗೊಳ್ಳುತ್ತಿದೆ. ಯೋಜನೆಯನ್ನು ಸಕಾಲದಲ್ಲಿ ಮತ್ತು ಉತ್ತಮ ಗುಣಮಟ್ಟದಲ್ಲಿ ಕಾರ್ಯಗತಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಪ್ರತಿನಿಧಿಗಳ ನಡುವಿನ ಸಮನ್ವಯದ ಪ್ರಯತ್ನವನ್ನು ಎತ್ತಿ ತೋರಿಸುತ್ತದೆ. ಅಮೃತ್ ಭಾರತ್ ಯೋಜನೆಯು ನಮ್ಮ ದೇಶದ ರೈಲ್ವೆ ಮೂಲಸೌಕರ್ಯವನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರವು ಇಟ್ಟಿರುವ ಒಂದು ದೂರದೃಷ್ಟಿಯ ಹೆಜ್ಜೆಯಾಗಿದೆ.

ದೊಡ್ಡಬಳ್ಳಾಪುರದ ಜನರಿಗೆ ಸುರಕ್ಷಿತ, ಅನುಕೂಲಕರ ಮತ್ತು ನಮ್ಮ ಇಡೀ ಕ್ಷೇತ್ರದ ಪ್ರಗತಿಯ ಸಂಕೇತವಾಗಿರುವ ಅತ್ಯಾಧುನಿಕ ರೈಲ್ವೆ ನಿಲ್ದಾಣವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ. ಈ ಯೋಜನೆಯು ಚಿಕ್ಕಬಳ್ಳಾಪುರ ವಲಯದಾದ್ಯಂತ ಅಭಿವೃದ್ಧಿಯನ್ನು ಉತ್ತೇಜಿಸಲು ಮತ್ತು ಸಾರ್ವಜನಿಕ ಸೇವೆಗಳನ್ನು ಸುಧಾರಿಸಲು ನಡೆಯುತ್ತಿರುವ ಪ್ರಯತ್ನಗಳ ಪ್ರಮುಖ ಭಾಗವಾಗಿದೆ ಎಂದರು.

ಈ ಯೋಜನೆಯಲ್ಲಿ ಆಧುನಿಕ ತಂತ್ರಜ್ಞಾನದ ಹೊಸ ನಿಲ್ದಾಣ ಕಟ್ಟಡ ನಿರ್ಮಾಣ, ಪ್ರವೇಶ ಮತ್ತು ನಿಗಮಣ ಕಾಮನು, ಶೌಚಾಲಯಗಳು, ಪ್ಲಾಟ್‌ಫಾರಂ ಶೆಲ್ಟರ್‌ ವಿಸ್ತರಣೆ, ಲಿಫ್ಟ್ ಮತ್ತು ಎಸ್ಕಲೇಟರ್‌, ವಿದ್ಯುತ್ ಮಾರ್ಗ ನವೀಕರಣ, ಮಾದರಿ ವೈದ್ಯಕೀಯ ಕೊಠಡಿಗಳು ಕಲ್ಪಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.

*ರೈಲ್ವೆ ನಿಲ್ದಾಣದ ವಿಶೇಷತೆ*

ಅಮೃತ ಭಾರತ್ ನಿಲ್ದಾಣ ಯೋಜನೆ’ (ABSS) ಅಡಿಯಲ್ಲಿ ಕೈಗೊಳ್ಳಲಾಗುತ್ತಿರುವ ನಿಲ್ದಾಣದ ಸಮಗ್ರ ಪುನರಾಭಿವೃದ್ದಿಗಾಗಿ 25.42 ಕೋಟಿ ಅನುದಾನ ಬಿಡುಗಡೆ ಆಗಿದ್ದು ನಿಲ್ದಾಣವನ್ನು ವಿಶ್ವದರ್ಜೆಯ ಮೂಲಸೌಕರ್ಯ ಮತ್ತು ಪ್ರಯಾಣಿಕರ ಸೌಲಭ್ಯಗಳೊಂದಿಗೆ ಆಧುನೀಕರಿಸಲಿದೆ.

ಪುನರಾಭಿವೃದ್ಧಿ ಯೋಜನೆಯು ಹಲವಾರು ಪ್ರಮುಖ ನವೀಕರಣಗಳನ್ನು ಒಳಗೊಂಡಿದ್ದು
* ಉತ್ತಮ ಸಂಪರ್ಕ: ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ಲಿಫ್ಟ್ ಮತ್ತು ಎಸ್ಕಲೇಟರ್ ಸೌಲಭ್ಯಗಳೊಂದಿಗೆ 12 ಮೀಟರ್ ಅಗಲದ ಹೊಸ ಪಾದಚಾರಿ ಮೇಲ್ಸೇತುವೆ (FOB).

* ಸುಧಾರಿತ ಪ್ರವೇಶ: ಹೊಸ ಎರಡನೇ ಪ್ರವೇಶ ದ್ವಾರದ ಕಟ್ಟಡ ಮತ್ತು ನಿಲ್ದಾಣದ ಎರಡೂ ಬದಿಗಳಲ್ಲಿ ಸುಸಜ್ಜಿತ ದ್ವಿಚಕ್ರ ಮತ್ತು ನಾಲ್ಕು-ಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶಗಳು.

* ಆಧುನಿಕ ಪ್ರಯಾಣಿಕರ ಸೌಲಭ್ಯಗಳು: ಹೊಸ ಪ್ಲಾಟ್‌ಫಾರ್ಮ್ ಶೆಲ್ಟರ್‌ಗಳು, ದಿವ್ಯಾಂಗರ ಸೌಲಭ್ಯಗಳನ್ನು ಒಳಗೊಂಡ ಆಧುನಿಕ ‘ಪಾವತಿಸಿ ಮತ್ತು ಬಳಸಿ’ ಶೌಚಾಲಯಗಳು, ಮತ್ತು ಪಾದಚಾರಿ ಮಾರ್ಗ ಸುಧಾರಿತ ಮುಖ್ಯ ಸಂಪರ್ಕ ರಸ್ತೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 hour ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago