26 ಪ್ರಕರಣಗಳನ್ನು ವಾದಿಸಿ ಜಯ‌ ಗಳಿಸಿದ್ದ ನಕಲಿ‌ ವಕೀಲ: ಸದ್ಯ ಪೊಲೀಸರ ವಶದಲ್ಲಿ ನಕಲಿ ವಕೀಲ

ಸುಮಾರು 26 ಪ್ರಕರಣಗಳಲ್ಲಿ ವಾದ ಮಂಡನೆ ಮಾಡಿ ಎಲ್ಲಾ ಪ್ರಕರಣಗಳನ್ನು ಗೆದ್ದಿದ್ದ ಕೀನ್ಯಾದ ಹೈಕೋರ್ಟ್‌ನ ನಕಲಿ ವಕೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರಂತೆ.

ಬ್ರಿಯಾನ್ ಮ್ವೆಂಡಾ, ನಕಲಿ ವಕೀಲ ಎಂದು‌ ಗುರುತಿಸಲಾಗಿದೆ. ಬಂಧಿತ ನಕಲಿ ವಕೀಲ ಮೆಂಡ್ವಾನನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು‌ ತಿಳಿದುಬಂದಿದೆ.

26 ಪ್ರಕರಣಗಳನ್ನು ಮ್ಯಾಜಿಸ್ಟ್ರೇಟ್‌ಗಳು, ಮೇಲ್ಮನವಿ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಹೈಕೋರ್ಟ್ ನ್ಯಾಯಾಧೀಶರ ಮುಂದೆ ವಾದ ಮಂಡಿಸಿದ್ದ ನಕಲಿ ವಕೀಲ ಮ್ವೆಂಡಾ. ಮ್ವೆಂಡಾ ಎಲ್ಲರ ಮುಂದೆ ನಿಜವಾದ ವಕೀಲನಂತೆ ನಟಿಸುತ್ತಿದ್ದ ಎನ್ನಲಾಗಿದೆ.

ಕೀನ್ಯಾದ ಲಾ ಸೊಸೈಟಿಯ ನೈರೋಬಿ ಶಾಖೆಯ ರಾಪಿಡ್ ಆಕ್ಷನ್ ತಂಡಕ್ಕೆ ಈತನ ವಿಚಾರವಾಗಿ ಸಾರ್ವಜನಿಕ ದೂರುಗಳು ಸಲ್ಲಿಕೆಯಾಗಿದ್ದವು. ನಂತರ, ವಕೀಲ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದ ಮ್ವೆಂಡಾನನ್ನು ಪೊಲೀಸರು ಕೂಡಲೇ ಬಂಧಿಸಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದಾರೆ ಎಂದು ಕೀನ್ಯಾದ ಲಾ ಸೊಸೈಟಿಯ ನೈರೋಬಿ ಬ್ರಾಂಚ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ಸ್ಪಷ್ಟಪಡಿಸಿದೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago