ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…