ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…