ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ – ಚಿದಾನಂದ್ ಮೂರ್ತಿ

ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಟಿ.ಡಿ.ಯು ನ ಉಪನ್ಯಾಸಕರಾದ ಡಾ. ಅಬ್ದುಲ್ ಕರೀಂ ಮಾತನಾಡಿ, ನಮ್ಮ ವಿದ್ಯಾರ್ಥಿ ಜೀವನದಲ್ಲಿ ಈ ರೀತಿ ಕಾಡಿನಲ್ಲಿ ಸುತ್ತಾಡುವ ಅವಕಾಶಗಳು ಸಿಗುತ್ತಿರಲಿಲ್ಲ. ಇಂದಿನ ಮಕ್ಕಳಿಗೆ ಈ ರೀತಿ ಅವಕಾಶವಿದ್ದರೂ ಉತ್ತಮ ಅರಣ್ಯ ಉಳಿದಿಲ್ಲ .ಅವುಗಳನ್ನು ಉಳಿಸಿಕೊಳ್ಳುವ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago