ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ – ಚಿದಾನಂದ್ ಮೂರ್ತಿ

ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಟಿ.ಡಿ.ಯು ನ ಉಪನ್ಯಾಸಕರಾದ ಡಾ. ಅಬ್ದುಲ್ ಕರೀಂ ಮಾತನಾಡಿ, ನಮ್ಮ ವಿದ್ಯಾರ್ಥಿ ಜೀವನದಲ್ಲಿ ಈ ರೀತಿ ಕಾಡಿನಲ್ಲಿ ಸುತ್ತಾಡುವ ಅವಕಾಶಗಳು ಸಿಗುತ್ತಿರಲಿಲ್ಲ. ಇಂದಿನ ಮಕ್ಕಳಿಗೆ ಈ ರೀತಿ ಅವಕಾಶವಿದ್ದರೂ ಉತ್ತಮ ಅರಣ್ಯ ಉಳಿದಿಲ್ಲ .ಅವುಗಳನ್ನು ಉಳಿಸಿಕೊಳ್ಳುವ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.

ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.

Ramesh Babu

Journalist

Recent Posts

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

4 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

15 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

20 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago