ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…