ಇಂದು ವಿಶ್ವ ಪರಿಸರ ಶಿಕ್ಷಣ ದಿನದ ಭಾಗವಾಗಿ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್, ಐ.ಆರ್.ಡಿ ಹಾಗು ಟಿ.ಡಿ.ಯು ಸಂಸ್ಥೆಗಳ ಸಹಯೋಗದಲ್ಲಿ ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ನಮ್ಮ ಸುತ್ತ ಮುತ್ತಲಿನ ನೈಸರ್ಗಿಕ ಸಂಪನ್ಮೂಲಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಪ್ರಶಂಸಿಸಲು ಸಹಾಯ ಮಾಡುವ ಮತ್ತು ಅನುಭವ, ವೀಕ್ಷಣೆ, ಪ್ರಯೋಗಗಳು ಮತ್ತು ಹೊರಾಂಗಣ ಕಲಿಕೆಯ ವ್ಯಾಪ್ತಿಯೊಂದಿಗೆ ಚಟುವಟಿಕೆಗಳ ಮೂಲಕ ಮುಂದಿನ ಪೀಳಿಗೆಗೆ ಆ ಸಂಪನ್ಮೂಲಗಳನ್ನು ಹೇಗೆ ಸಂರಕ್ಷಿಸುವುದು ಎಂಬುದನ್ನು ಕಲಿಯಲು, ಪರಿಸರದಲ್ಲಿ ಅಗತ್ಯ ಆಸಕ್ತಿಯನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುವ ಕಾರ್ಯಕ್ರಮವನ್ನು ಮಾಕಳಿ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿತ್ತು.
ವಲಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕೃಷ್ಣೇಗೌಡ ಮಾತನಾಡಿ, ಬೇಸಿಗೆಯಲ್ಲಿ ಅಸಹಜವಾಗಿ ಕಾಡಿಗೆ ಬೆಂಕಿ ಬೀಳುತ್ತಿದ್ದು, ಇದು ಮಾನವ ನಿರ್ಮಿತವಾಗಿದೆ ಇದರ ಬಗ್ಗೆ ಮಕ್ಕಳು ಇಂದಿನಿಂದಲೆ ಅರಿವು ಮೂಡಿಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.
ಏ.ಆರ್.ಡಿ ಯ ಮಾನವಶಾಸ್ತ್ರಜ್ಞರಾದ ಡಾ. ರೊಮೈನ್ ಸಿಮೆನೆಲ್ ಮಾತನಾಡಿ, ಹಾರ, ಆಟಿಕೆ ತಯಾರಿಕೆ, ಸಸ್ಯಗಳೊಂದಿಗೆ ಸಂಗೀತವನ್ನು ಅನ್ವೇಷಿಸುವುದು, ಸಸ್ಯಗಳಿಂದ ಬಣ್ಣ, ಸಸ್ಯಗಳ ಔಷಧೀಯ ಉಪಯೋಗಗಳು ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಿಗೆ ನಲಿ ಕಲಿಯ ಪ್ರಯೋಗದೊಂದಿಗೆ ಕಾನನದಲ್ಲಿ ಒಳಗೊಳಿಸುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಿದಾನಂದ್ ಮೂರ್ತಿ ಮಾತನಾಡಿ, ಮಕ್ಕಳು ಪರಿಸರದೊಂದಿಗೆ ಬೆರೆತಷ್ಟು ಅದರ ಮೇಲಿನ ಕಾಳಜಿ ಹೆಚ್ಚಾಗುತ್ತದೆ. ಆದ ಕಾರಣ ಶಿಕ್ಷಣದ ಭಾಗವಾಗಿ ಮಕ್ಕಳಿಗೆ ಪರಿಸರ ಶಿಕ್ಷಣವನ್ನು ಕಲಿಸುವ ಉದ್ದೇಶದಿಂದ ಸಸ್ಯ ವಿಜ್ಞಾನಿಗಳೊಂದಿಗೆ ಪರಿಸರವಾದಿಗಳೊಂದಿಗೆ ಮಕ್ಕಳನ್ನು ತೊಡಗಿಸಿ ಸಸ್ಯಗಳ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ ತಿಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದರು.
ಸಸ್ಯ ವಿಜ್ಞಾನಿಗಳಾದ ಆರ್. ಗಣೇಶನ್(ಏಟ್ರಿ), ವೈಷ್ಣವಿ (ಏಟ್ರಿ), ಟಿ.ಡಿ.ಯುನಿವರ್ಸಿಟಿಯ ಅಮ್ರಿತ, ಅರುಣ್, ಸುದೇಶ್ನಾ ಪ್ರಧಾನ್ (ಐ.ಆರ್.ಡಿ), ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ ನ ಮುರುಳಿ, ದಿವಾಕರ್, ನವೀನ್ ಮತ್ತು ಆರೂಢಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎಂ. ಸಿದ್ದರಾಮಪ್ಪ ಹಾಗು ಸಹ ಶಿಕ್ಷಕರಾದ ಶ್ರೀನಿವಾಸ್, ಕಾವ್ಯ, ಮಾಲಾಶ್ರೀ ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನರಸಿಂಹಪ್ಪ ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…