28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ಆರೋಪಿ ಬಂಧನ: ಬಂಧಿತನಿಂದ 522 ನಕಲಿ ಅಂಕಪಟ್ಟಿಗಳ ವಶ

ಕಲಬುರಗಿ ನಗರದ ಸಿಇಎನ್ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆಯಾಗಿದೆ. ಭಾರತದಾದ್ಯಂತ ವಿವಿಧ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ದೆಹಲಿ ಮೂಲದ ಆರೋಪಿಯ ಬಂಧನ. ಸದ್ಯ ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್‌ ಟಾಪ್, 1 ಪ್ರಿಂಟರ್​​, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್​​ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್​​​ಗಳನ್ನು ಹಾಗೂ 1,20,000/- ನಗದು ಹಣ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಅಂತರ್ ರಾಜ್ಯ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್ ಡಿ ಅವರು ಪ್ರಶಂಸನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.

ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿ. ನವದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ಕಳೆದ ಏಳೆಂಟು ವರ್ಷಗಳಿಂದ ನಕಲಿ ಅಂಕ ಪಟ್ಟಿ ತಯಾರಿ ಮಾಡುತ್ತಿದ್ದ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್​​ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago