ಕರಾವಳಿ : ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಮುನ್ಸೂಚೆನೆ ಇದ್ದರೂ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ. ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಮೇ 28 ರಿಂದ ಮತ್ತೆ ಮಳೆ ಚುರುಕಾಗುವ ಲಕ್ಷಣಗಳಿದ್ದು, ಜೂನ್ 3ರ ತನಕ ಮುಂದುವರಿಯುವ ಸಾಧ್ಯತೆಗಳಿವೆ.
ಮಲೆನಾಡು : ಕೊಡಗು ಜಿಲ್ಲೆಯಲ್ಲೂ ಮಳೆಯ ತೀವ್ರತೆ ಕಡಿಮೆಯಾಗುವ ಮುನ್ಸೂಚನೆ ಇದ್ದರೂ ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ ಮುಂಗಾರು ಮತ್ತೆ ಚುರುಕಾದರೂ ಜೂನ್ 1ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.
ಒಳನಾಡು : ಉತ್ತರ ಒಳನಾಡಿನ ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಹಾವೇರಿ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಮಾತ್ರ ಇರಬಹುದು.
ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೈಸೂರು ಜಿಲ್ಲೆಯ ಕೊಡಗು ಜಿಲ್ಲೆಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಮೇ 28ರಿಂದ 2 ದಿವಸಗಳ ಕಾಲ ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ ಇದ್ದು, ನಂತರ ಬಿಸಿಲಿನ ಅವಧಿ ಹೆಚ್ಚಿರಬಹುದು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ 4 ದಿನಗಳಲ್ಲಿ ಶಿಥಿಲಗೊಳ್ಳುತ್ತಿದ್ದಂತೆಯೇ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿವೆ. ಜೂನ್ ಮೊದಲವಾರದಲ್ಲಿ ರಾಜ್ಯದಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚೆನೆ ಇದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…