ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಸ್ಲೋಚ್ ಕ್ಯಾಪ್ ಗೆ ವಿದಾಯ: ನೀಲಿ ಬಣ್ಣದ ಪೀಕ್ ಕ್ಯಾಪ್ ಧರಿಸಿ ಮಿಂಚಿದ ಬೆಂ ಗ್ರಾ ಜಿಲ್ಲಾ ಪೊಲೀಸ್ ಸಿಬ್ಬಂದಿ

1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…

9 hours ago

ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಪೊಲೀಸ್ ಇಲಾಖೆ ಕೈಗೊಳ್ಳಬೇಕು- ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…

10 hours ago

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…

12 hours ago

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…

15 hours ago

“ಕುವೆಂಪು”….. ಸಾಹಿತ್ಯ – ವಿಶ್ವ ಮಾನವ ಪ್ರಜ್ಞೆ……

ಕುವೆಂಪು......... ಸಾಹಿತ್ಯ - ವಿಶ್ವ ಮಾನವ ಪ್ರಜ್ಞೆ...... ಅಕ್ಷರಗಳ ಸಂಶೋಧನೆ - ಬರವಣಿಗೆ - ಸಾಹಿತ್ಯ - ಕನ್ನಡ ಭಾಷೆ…

21 hours ago

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

2 days ago