ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

10 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

14 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

14 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

19 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago