ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

5 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

5 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

7 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

8 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

9 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

16 hours ago