ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

4 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

8 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago