ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

15 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

15 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

18 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

19 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

23 hours ago