ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

12 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

23 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

1 day ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago