ಮಹಾರಾಷ್ಟ್ರದಲ್ಲಿ ಕನ್ನಡದ ವಾಹನಗಳ ಮೇಲೆ ಎಂಇಎಸ್ ಪುಂಡಾಟಿಕೆ ವಿಚಾರ: ಮಹಾರಾಷ್ಟ್ರದವರಿಗೆ ಗುಲಾಬಿ ಕೊಟ್ಟು, ಸಿಹಿ ಹಂಚಿ‌ ಗೌರವಯುತವಾಗಿ ನಡೆಸಿಕೊಂಡ ಕರವೇ ರಾಜಘಟ್ಟ ರವಿ ನೇತೃತ್ವದ ತಂಡ

ಮರಾಠಿ ಮಾತನಾಡದ ಕರ್ನಾಟಕದ ಬಸ್‌ ಕಂಡಕ್ಟರ್‌ ಮೇಲಿನ ದಾಳಿ ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)‌ಯ ಪುಂಡಾಟಿಕೆ ವಿರುದ್ಧ ಕನ್ನಡ ಶಕ್ತಿಗಳು ಒಂದಾಗಿವೆ. ಭಾಷಾಗ್ನಿಯ ಕುಂಡವಾಗಿ ಮಾರ್ಪಟ್ಟಿರುವ ಬೆಳಗಾವಿಗೆ ಈಗಾಗಲೇ ಕನ್ನಡಪರ ಸಂಘಟನೆಗಳ ನಾಯಕರು ಕಾಲಿಟ್ಟಿದ್ದು, ಎಂಇಎಸ್‌ ಮರಾಠಿ ಪುಂಡರ ಗುಂಪಿನ ದೌರ್ಜನ್ಯವನ್ನು ಅಂತ್ಯಗೊಳಿಸುವ ಶಪಥ ಮಾಡಿದ್ದಾರೆ.

ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ರಾಜಘಟ್ಟ ರವಿ ನೇತೃತ್ವದ ತಂಡ ಇಂದು ದೇವನಹಳ್ಳಿ-ದೊಡ್ಡಬಳ್ಳಾಪುರ ನಡುವೆ ರಾಷ್ಟ್ರೀಯ ಹೆದ್ದಾರಿ 648 ರಲ್ಲಿ ಬಹಳ ಶಾಂತಿಯುತವಾಗಿ ಮಹಾರಾಷ್ಟ್ರದ ವಾಹನಗಳನ್ನು ನಿಲ್ಲಿಸಿ ವಾಹನ ಚಾಲಕರಿಗೆ ಗುಲಾಬಿ ಹೂ ಹಾಗೂ ಸಿಹಿ ಕೊಟ್ಟು ಸನ್ನಡತೆಯಿಂದ ನಡೆಸಿಕೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿನ ಎಂಇಎಸ್ ಪುಂಡರಿಗೆ ನಿಮ್ಮ ವಾಹನಗಳು ನಮ್ಮಲ್ಲಿಗೆ ಬರುತ್ತೆ ಅಂತ ಎಚ್ಚರಿಕೆ‌ಯನ್ನು ನೀಡಿದ್ದಾರೆ. ನಮ್ಮ ಸನ್ನಡತೆಯನ್ನು ಮಹಾರಾಷ್ಟ್ರದಲ್ಲಿನ ಎಂಇಎಸ್ ಅವರಿಗೆ ತಿಳಿಸುವಂತೆ ಸೂಚನೆ ನೀಡಿದ್ದಾರೆ.

ಈ ವೇಳೆ ಕರವೇ ಮುಖಂಡ ರಾಜಘಟ್ಟ ರವಿ ಮಾತನಾಡಿ, ಹಿಂಸೆಯಿಂದ ಏನನ್ನು ಸಾಧಿಸುವುದಕ್ಕೆ ಆಗೋದಿಲ್ಲ. ನಾವು ಅವರ ರೀತಿ ಕಾನೂನಿನ ಎಲ್ಲೆ ಮೀರುವುದಿಲ್ಲ. ಮಹಾರಾಷ್ಟ್ರದವರಿಗೆ ಹೂ, ಸಿಹಿ ಹಂಚಿ ಗೌರವ ಕೊಟ್ಟು ಸುರಕ್ಷಿತವಾಗಿ ಕಳುಹಿಸಿಕೊಡುತ್ತಿದ್ದೇವೆ. ಇದು ನಮ್ಮ ಕರ್ನಾಟಕ ಜನತೆಯ ಒಳ್ಳೇತನ. ನಮ್ಮ ಹೋರಾಟ ಏನಿದ್ದರು ಎಂಇಎಸ್‌ ಮರಾಠಿ ಪುಂಡರ ವಿರುದ್ಧ, ನಮ್ಮ ಆಕ್ರೋಶ ಕನ್ನಡ ವಿರೋಧಿಗಳ ಮೇಲೆ, ಶಿವಸೇನೆ ಪುಂಡರ ಮೇಲೆ ಹೊರೆತು ಅಲ್ಲಿನ ಅಮಾಯಕರ ಮೇಲೆ ಅಲ್ಲ ಎಂದು ಹೇಳಿದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

1 hour ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

4 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

17 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago