ರಕ್ತ ಹೀನತೆ ತಪಾಸಣಾ ಶಿಬಿರ

ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.

ಸ್ತ್ರೀರೋಗ ತಜ್ಞರಾದ ಡಾ‌. ಇಂದಿರಾ ರವರು ಮಾತನಾಡಿ  “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.

ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.

ಐ.ಎ.ಐ.ಎಮ್ ನ ವೈದ್ಯಕೀಯ ಅಧಿಕಾರಿಯಾದ ಡಾ. ಭಾನುಪ್ರಿಯ ರವರು ಮಾತನಾಡಿ ” ಇದು ಕೇಂದ್ರ ಸರ್ಕಾರದ ಕಾರ್ಯಕ್ರಮವಾಗಿದ್ದು 18 ರಿಂದ 60 ವಯಸ್ಸಿನ ಸ್ತ್ರೀಯರಲ್ಲಿ ಉಂಟಾಗುವ ರಕ್ತ ಹೀನತೆ ಸಮಸ್ಯೆಯನ್ನು ಗುರುತಿಸಿ ಅವರಿಗೆ ಉಚಿತವಾಗಿ 3 ತಿಂಗಳು ಔಷಧಿಯನ್ನು ಅಂದರೆ ದ್ರಾಕ್ಷಾವಲೇಹವನ್ನು ನೀಡುತ್ತೇವೆ ಇದನ್ನು ಬಿಸಿನೀರು ಅಥವಾ ಹಾಲಿನಲ್ಲಿ ಬೆರೆಸಿ ಸೇವಿಸಬಹುದು ಹಾಗೂ ನಿರಂತರವಾಗಿ ಅವರಿಗೆ ತಿಂಗಳಿಗೊಮ್ಮೆ ತಪಾಸಣೆ ನಡೆಸಿ ರಕ್ತ ಹೀನತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ” ಎಂದು ತಿಳಿಸಿದರು.

ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ  ಉಪಸ್ಥಿತರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

17 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

17 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

22 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago