ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸ್ತ್ರೀರೋಗ ತಜ್ಞರಾದ ಡಾ. ಇಂದಿರಾ ರವರು ಮಾತನಾಡಿ “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.
ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ ಉಪಸ್ಥಿತರಿದ್ದರು.
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…
ಇತ್ತೀಚೆಗೆ ಮಂಡ್ಯ ಮೂಲಕ ವ್ಯಕ್ತಿ ಮಹಿಳೆ ಮತ್ತು ಆಕೆಯ ಸಹಚರರ ಜಾಲಕ್ಕೆ ಸಿಲುಕಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ನಂತರ ಅರೆ…
ಮನನೊಂದ ವ್ಯಕ್ತಿಯೋರ್ವ ಮನೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮುಕ್ತಾಂಭಿಕಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಸುಮಾರು 10ಗಂಟೆಯಲ್ಲಿ ನಡೆದಿದೆ....…
2026ಕ್ಕೆ ಕೆಲವೇ ಗಂಟೆಗಳು ಇರುವಾಗ.......... ಒಂದು ಜೀವನದ ಇಲ್ಲಿಯವರೆಗಿನ ನೆನಪಿನ ಪಯಣ......... " ನಿದ್ದೆಗೊಮ್ಮೆ ನಿತ್ಯ ಮರಣ ಎದ್ದ ಸಲ…
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…
ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…