ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸ್ತ್ರೀರೋಗ ತಜ್ಞರಾದ ಡಾ. ಇಂದಿರಾ ರವರು ಮಾತನಾಡಿ “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.
ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…
ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…
ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…
ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…
ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…
ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…