ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸ್ತ್ರೀರೋಗ ತಜ್ಞರಾದ ಡಾ. ಇಂದಿರಾ ರವರು ಮಾತನಾಡಿ “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.
ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ ಉಪಸ್ಥಿತರಿದ್ದರು.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…