ಫೆ.24 ರಿಂದ 28ರವರೆಗೆ ನಡೆದ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಐ. ಎ. ಐ. ಎಮ್ ಸಹಯೋಗದಲ್ಲಿ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ರಕ್ತ ಹೀನತೆ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಸ್ತ್ರೀರೋಗ ತಜ್ಞರಾದ ಡಾ. ಇಂದಿರಾ ರವರು ಮಾತನಾಡಿ “ರಕ್ತ ಹೀನತೆ ಸಮಸ್ಯೆ ಮಹಿಳೆಯರಲ್ಲಿ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದ್ದು ಇದು ಆತಂಕಕಾರಿಯಾಗಿದೆ. ತಾಯಂದಿರ ಸಾವಿಗೆ ಮುಖ್ಯ ಕಾರಣ ರಕ್ತ ಹೀನತೆ. ಹಾಗಾಗಿ ನಾವು ನಮ್ಮ ಆಹಾರ ಶೈಲಿಯ ಮೇಲೆ ಗಮನಹರಿಸಬೇಕಿದೆ. ಫೈಬರ್, ಪ್ರೋಟೀನ್, ವಿಟಮಿನ್ ನೀಡುವ ಆಹಾರಗಳನ್ನು ಪ್ರಜ್ಞಾಪೂರ್ವಕವಾಗಿ ಸೇವಿಸುವುದನ್ನು ಅಳವಡಿಸಿಕೊಳ್ಳಬೇಕು ಹಾಗೂ ಅವುಗಳು ಜೀರ್ಣವಾಗುವಷ್ಟು ದೈಹಿಕ ಚಟುವಟಿಕೆ ಇರಬೇಕು. ಹೆಣ್ಣಿಗೆ 12 ವರ್ಷಗಳು ತುಂಬಿದ ನಂತರದಿಂದ ತನ್ನ ಜೀವನಾವದಿ ಮುಗಿಯುವವರೆಗು 12 ಗ್ರಾಂ ಎಚ್. ಬಿ ಇದ್ದರೆ ಯಾವುದೇ ರೋಗ ಬರುವುದಿಲ್ಲ ಜೊತೆಗೆ ದೇಹದ ಆರೋಗ್ಯಕ್ಕೆ ಬೇಕಾದ ಚಟುವಟಿಕೆಗಳನ್ನು ಮಾಡಬೇಕು. ಈ ರೀತಿ ಮಾಡುವುದರಿಂದ ಯಾವ ರೋಗ ಬಂದರು ಜಯಿಸಿಕೊಳ್ಳಬಹುದು” ಎಂದು ಹೇಳಿದರು.
ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷ ಚದಾಂದಮೂರ್ತಿ ಮಾತನಾಡಿ, ಇಂದಿನ ಮಕ್ಕಳು ಅಮ್ಮನ ಕೈ ತುತ್ತಿಗಿಂತಲು ರಸ್ತೆ ಬದಿಯಲ್ಲಿನ ಪಾನಿಪೂರಿಯವರ ಕೈ ತುತ್ತುಗಳನ್ನೇ ಹೆಚ್ಚಾಗಿ ತಿನ್ನುವಂತಾಗಿದೆ. ಇದರಿಂದ ಆರೋಗ್ಯ ಹಾಳಾಗುವುದಲ್ಲದೆ ದೈಹಿಕ ಬೆಳೆವಣಿಗೆ ಮೇಲೂ ಪರಿಣಾಮ ಬೀರಲಿದೆ. ಅದರಲ್ಲೂ ಹೆಣ್ಣು ಮಕ್ಕಳು ರಕ್ತ ಹೀನರಾದರೆ ಇಡೀ ಸಮಾಜವೇ ಆನಾರೋಗ್ಯಕ್ಕೆ ಒಳಗಾಗುವಂತಾಗಲಿದೆ ಎಂದರು.
ಶಿಬಿರದ ಉದ್ಘಾಟನ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಸುದರ್ಶನ್ ಕುಮಾರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ. ಎ. ಐ. ಎಮ್ ನ ಶುಕ್ಲಾ ಆರ್ , ಸ್ನೇಹ ಸಿಂಗ್, ಸ್ವಾತಿ, ಚೈತ್ರ ಮತ್ತು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ದಿವ್ಯಶ್ರೀ, ವರುಣ್ ರಾಜ್, ನಂಜಪ್ಪ, ಸುಷ್ಮಾ, ಭಾರತಿ ಹಾಗೂ ಯುವ ಸಂಚಲನ ಚಾರಿಟೇಬಲ್ ಟ್ರಸ್ಟ್ (ರಿ.) ನ ಮುರುಳಿ, ನವೀನ್ ಕುಮಾರ್,ಸರಸ್ವತಿ, ಲಾವಣ್ಯ, ಮತ್ತು ಸಂಧ್ಯಾ ಉಪಸ್ಥಿತರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…